12:29 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ನಂಜನಗೂಡು: ಭೀಮ ಕೋರೆ ಗಾಂವ್ ವಿಜಯೋತ್ಸವದ ಅಂಗವಾಗಿ ಜನಜಾಗೃತಿ ಸಮಾವೇಶದ ಪೋಸ್ಟರ್ ಬಿಡುಗಡೆ

31/12/2024, 17:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

2007ನೇ ಭೀಮ ಕೊರೆಗಾಂವ್ ವಿಜಯೋತ್ಸವದ ಅಂಗವಾಗಿ ಜನಜಾಗೃತಿ ಸಮಾವೇಶವನ್ನು ಇದೇ ಜನವರಿ 12 ಭಾನುವಾರದಂದು ನಂಜನಗೂಡಿನ ಅಂಬೇಡ್ಕರ್ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ ವಿಜಯಕುಮಾರ್ ಹಾಗೂ ಗೌರವಾಧ್ಯಕ್ಷ ಕಾರ್ಯ ಬಸವಣ್ಣ ತಿಳಿಸಿದ್ದಾರೆ.


ಇಂದು ನಂಜನಗೂಡು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಸಮಾವೇಶದ ಅಂಗವಾಗಿ ಜನವರಿ ಒಂದರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ರಂಗಾಯಣದ ಮಾಜಿ ನಿರ್ದೇಶಕರಾದ ಜನಾರ್ದನ್ ಅವರು ಪ್ರಚಾರ ಹಾಗೂ ಜನಜಾಗೃತಿಯ ಸ್ತಬ್ಧಚಿತ್ರಕ್ಕೆ ಚಾಲನೆ ನೀಡುವರು. ಬಳಿಕ ಜನವರಿ 12ರಂದು ನಡೆಯುವ ಸಮಾವೇಶದ ಪ್ರಯುಕ್ತ ಅಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಿಂದ ಹೊರಡುವ ಮೆರವಣಿಗೆಗೆ ಮೈಸೂರಿನ ಹುರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿಗಳು ಚಾಲನೆ ನೀಡಲಿದ್ದಾರೆ.
ವಿವಿಧ ಜಾನಪದ ಕಲಾತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯು ಸಾಗಿ ಅಂಬೇಡ್ಕರ್ ಭವನ ತಲುಪಲಿದೆ. ನಂತರ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಟಿವಿ 5 ನಿರೂಪಕರು ಹಾಗೂ ಪ್ರಧಾನ ಸಂಪಾದಕರಾದ ರಮಾಕಾಂತ್ ಉದ್ಘಾಟನೆ ಮಾಡಲಿದ್ದಾರೆ.
ಮುಖ್ಯ ಭಾಷಣಕಾರರಾಗಿ ಪ್ರಗತಿಪರ ಚಿಂತಕರಾದ ಡಾ. ಎಲ್. ಎನ್‌ ಮುಕುಂದರಾಜ್ ಭಾಗವಹಿಸಲಿದ್ದು ಸಂಘಟನೆಯ ನಿಕಟ ಪೂರ್ವ ಅಧ್ಯಕ್ಷರಾದ ಅಭಿನಾಗಭೂಷಣ್ ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದಾರೆ ಎಂದು ಕೋರೆಗಾವ್ ವಿಜಯೋತ್ಸವ ಹಾಗೂ ಜನ ಜಾಗೃತಿ ಸಮಾವೇಶದ ಬಗ್ಗೆ ವಿವರಿಸಿ ಕಾರ್ಯಕ್ರಮಕ್ಕೆ ವಿವಿಧ ಸಂಘಟನೆಗಳ ಮುಖಂಡರು, ಪ್ರಗತಿಪರ ಚಿಂತಕರು, ಅಂಬೇಡ್ಕರ್ ಅವರ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡರು
ಇದೇ ಸಂದರ್ಭ ಕೊರೆಗಾಂವ್ ಜನ ಜಾಗೃತಿ ಸಮಾವೇಶದ ಪೋಸ್ಟರ್ ಹಾಗೂ ಕರಪತ್ರಗಳನ್ನು ಬಿಡುಗಡೆಗೊಳಿಸಿದರು.
ಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಮುಖಂಡರಾದ ಮಲ್ಲೇಶ್ ಚುಂಚನಹಳ್ಳಿ, ಪುಟ್ಟಸ್ವಾಮಿ, ಸುರೇಶ್ ಶಂಕರಪುರ, ಜೈ ಶಂಕರ್, ಯಶ್ವಂತ್ ಕುಮಾರ್, ಪ್ರಶಾಂತ್, ಕುಮಾರ್, ಮರಿಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು