1:21 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ನಂಜನಗೂಡು: ಭೀಮ ಕೋರೆ ಗಾಂವ್ ವಿಜಯೋತ್ಸವದ ಅಂಗವಾಗಿ ಜನಜಾಗೃತಿ ಸಮಾವೇಶದ ಪೋಸ್ಟರ್ ಬಿಡುಗಡೆ

31/12/2024, 17:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

2007ನೇ ಭೀಮ ಕೊರೆಗಾಂವ್ ವಿಜಯೋತ್ಸವದ ಅಂಗವಾಗಿ ಜನಜಾಗೃತಿ ಸಮಾವೇಶವನ್ನು ಇದೇ ಜನವರಿ 12 ಭಾನುವಾರದಂದು ನಂಜನಗೂಡಿನ ಅಂಬೇಡ್ಕರ್ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ ವಿಜಯಕುಮಾರ್ ಹಾಗೂ ಗೌರವಾಧ್ಯಕ್ಷ ಕಾರ್ಯ ಬಸವಣ್ಣ ತಿಳಿಸಿದ್ದಾರೆ.


ಇಂದು ನಂಜನಗೂಡು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಸಮಾವೇಶದ ಅಂಗವಾಗಿ ಜನವರಿ ಒಂದರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ರಂಗಾಯಣದ ಮಾಜಿ ನಿರ್ದೇಶಕರಾದ ಜನಾರ್ದನ್ ಅವರು ಪ್ರಚಾರ ಹಾಗೂ ಜನಜಾಗೃತಿಯ ಸ್ತಬ್ಧಚಿತ್ರಕ್ಕೆ ಚಾಲನೆ ನೀಡುವರು. ಬಳಿಕ ಜನವರಿ 12ರಂದು ನಡೆಯುವ ಸಮಾವೇಶದ ಪ್ರಯುಕ್ತ ಅಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಿಂದ ಹೊರಡುವ ಮೆರವಣಿಗೆಗೆ ಮೈಸೂರಿನ ಹುರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿಗಳು ಚಾಲನೆ ನೀಡಲಿದ್ದಾರೆ.
ವಿವಿಧ ಜಾನಪದ ಕಲಾತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯು ಸಾಗಿ ಅಂಬೇಡ್ಕರ್ ಭವನ ತಲುಪಲಿದೆ. ನಂತರ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಟಿವಿ 5 ನಿರೂಪಕರು ಹಾಗೂ ಪ್ರಧಾನ ಸಂಪಾದಕರಾದ ರಮಾಕಾಂತ್ ಉದ್ಘಾಟನೆ ಮಾಡಲಿದ್ದಾರೆ.
ಮುಖ್ಯ ಭಾಷಣಕಾರರಾಗಿ ಪ್ರಗತಿಪರ ಚಿಂತಕರಾದ ಡಾ. ಎಲ್. ಎನ್‌ ಮುಕುಂದರಾಜ್ ಭಾಗವಹಿಸಲಿದ್ದು ಸಂಘಟನೆಯ ನಿಕಟ ಪೂರ್ವ ಅಧ್ಯಕ್ಷರಾದ ಅಭಿನಾಗಭೂಷಣ್ ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದಾರೆ ಎಂದು ಕೋರೆಗಾವ್ ವಿಜಯೋತ್ಸವ ಹಾಗೂ ಜನ ಜಾಗೃತಿ ಸಮಾವೇಶದ ಬಗ್ಗೆ ವಿವರಿಸಿ ಕಾರ್ಯಕ್ರಮಕ್ಕೆ ವಿವಿಧ ಸಂಘಟನೆಗಳ ಮುಖಂಡರು, ಪ್ರಗತಿಪರ ಚಿಂತಕರು, ಅಂಬೇಡ್ಕರ್ ಅವರ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡರು
ಇದೇ ಸಂದರ್ಭ ಕೊರೆಗಾಂವ್ ಜನ ಜಾಗೃತಿ ಸಮಾವೇಶದ ಪೋಸ್ಟರ್ ಹಾಗೂ ಕರಪತ್ರಗಳನ್ನು ಬಿಡುಗಡೆಗೊಳಿಸಿದರು.
ಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಮುಖಂಡರಾದ ಮಲ್ಲೇಶ್ ಚುಂಚನಹಳ್ಳಿ, ಪುಟ್ಟಸ್ವಾಮಿ, ಸುರೇಶ್ ಶಂಕರಪುರ, ಜೈ ಶಂಕರ್, ಯಶ್ವಂತ್ ಕುಮಾರ್, ಪ್ರಶಾಂತ್, ಕುಮಾರ್, ಮರಿಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು