4:59 PM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ನಂಜನಗೂಡು: ಭೀಮ ಕೋರೆ ಗಾಂವ್ ವಿಜಯೋತ್ಸವದ ಅಂಗವಾಗಿ ಜನಜಾಗೃತಿ ಸಮಾವೇಶದ ಪೋಸ್ಟರ್ ಬಿಡುಗಡೆ

31/12/2024, 17:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

2007ನೇ ಭೀಮ ಕೊರೆಗಾಂವ್ ವಿಜಯೋತ್ಸವದ ಅಂಗವಾಗಿ ಜನಜಾಗೃತಿ ಸಮಾವೇಶವನ್ನು ಇದೇ ಜನವರಿ 12 ಭಾನುವಾರದಂದು ನಂಜನಗೂಡಿನ ಅಂಬೇಡ್ಕರ್ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಗರ್ಲೆ ವಿಜಯಕುಮಾರ್ ಹಾಗೂ ಗೌರವಾಧ್ಯಕ್ಷ ಕಾರ್ಯ ಬಸವಣ್ಣ ತಿಳಿಸಿದ್ದಾರೆ.


ಇಂದು ನಂಜನಗೂಡು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಸಮಾವೇಶದ ಅಂಗವಾಗಿ ಜನವರಿ ಒಂದರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ರಂಗಾಯಣದ ಮಾಜಿ ನಿರ್ದೇಶಕರಾದ ಜನಾರ್ದನ್ ಅವರು ಪ್ರಚಾರ ಹಾಗೂ ಜನಜಾಗೃತಿಯ ಸ್ತಬ್ಧಚಿತ್ರಕ್ಕೆ ಚಾಲನೆ ನೀಡುವರು. ಬಳಿಕ ಜನವರಿ 12ರಂದು ನಡೆಯುವ ಸಮಾವೇಶದ ಪ್ರಯುಕ್ತ ಅಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಿಂದ ಹೊರಡುವ ಮೆರವಣಿಗೆಗೆ ಮೈಸೂರಿನ ಹುರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿಗಳು ಚಾಲನೆ ನೀಡಲಿದ್ದಾರೆ.
ವಿವಿಧ ಜಾನಪದ ಕಲಾತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯು ಸಾಗಿ ಅಂಬೇಡ್ಕರ್ ಭವನ ತಲುಪಲಿದೆ. ನಂತರ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಟಿವಿ 5 ನಿರೂಪಕರು ಹಾಗೂ ಪ್ರಧಾನ ಸಂಪಾದಕರಾದ ರಮಾಕಾಂತ್ ಉದ್ಘಾಟನೆ ಮಾಡಲಿದ್ದಾರೆ.
ಮುಖ್ಯ ಭಾಷಣಕಾರರಾಗಿ ಪ್ರಗತಿಪರ ಚಿಂತಕರಾದ ಡಾ. ಎಲ್. ಎನ್‌ ಮುಕುಂದರಾಜ್ ಭಾಗವಹಿಸಲಿದ್ದು ಸಂಘಟನೆಯ ನಿಕಟ ಪೂರ್ವ ಅಧ್ಯಕ್ಷರಾದ ಅಭಿನಾಗಭೂಷಣ್ ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದಾರೆ ಎಂದು ಕೋರೆಗಾವ್ ವಿಜಯೋತ್ಸವ ಹಾಗೂ ಜನ ಜಾಗೃತಿ ಸಮಾವೇಶದ ಬಗ್ಗೆ ವಿವರಿಸಿ ಕಾರ್ಯಕ್ರಮಕ್ಕೆ ವಿವಿಧ ಸಂಘಟನೆಗಳ ಮುಖಂಡರು, ಪ್ರಗತಿಪರ ಚಿಂತಕರು, ಅಂಬೇಡ್ಕರ್ ಅವರ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡರು
ಇದೇ ಸಂದರ್ಭ ಕೊರೆಗಾಂವ್ ಜನ ಜಾಗೃತಿ ಸಮಾವೇಶದ ಪೋಸ್ಟರ್ ಹಾಗೂ ಕರಪತ್ರಗಳನ್ನು ಬಿಡುಗಡೆಗೊಳಿಸಿದರು.
ಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಮುಖಂಡರಾದ ಮಲ್ಲೇಶ್ ಚುಂಚನಹಳ್ಳಿ, ಪುಟ್ಟಸ್ವಾಮಿ, ಸುರೇಶ್ ಶಂಕರಪುರ, ಜೈ ಶಂಕರ್, ಯಶ್ವಂತ್ ಕುಮಾರ್, ಪ್ರಶಾಂತ್, ಕುಮಾರ್, ಮರಿಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು