1:22 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಮೈಸೂರು ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ; ಡ್ರೋನ್ ಬಳಕೆ: ಸಚಿವ ಈಶ್ವರ ಖಂಡ್ರೆ

31/12/2024, 20:11

•ಜನವಸತಿ ಪ್ರದೇಶಕ್ಕೆ ಚಿರತೆ ನುಗ್ಗದಂತೆ ಕ್ರಮ- ಅರಣ್ಯ ಸಚಿವರು
•ಚಿರತೆ ಪತ್ತೆಗೆ ಡ್ರೋನ್ ಕ್ಯಾಮರಾ ಬಳಕೆ:ಈಶ್ವರ ಖಂಡ್ರೆ

ಬೀದರ್(reporterkarnataka.com): ಮೈಸೂರು ನಗರದ ಇನ್ಫೋಸಿಸ್ ಆವರಣದಲ್ಲಿ ಇಂದು ನಸುಕಿನ 4.30ರ ಸುಮಾರಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಇದರ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು, ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸಿಸಿ ಟಿವಿಯಲ್ಲಿ ಚಿರತೆ ಸಂಚಾರದ ದೃಶ್ಯಗಳು ಸೆರೆಯಾಗಿದ್ದು, ಇಂದು ಮಧ್ಯಾಹ್ನ 12ರ ಸುಮಾರಿನಲ್ಲಿ ಚಿರತೆ ಇರುವಿಕೆ ಖಚಿತವಾದ ಹಿನ್ನೆಲೆಯಲ್ಲಿ ತುರ್ತು ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ್ದು ಆತಂಕ ಪಡುವ ಅಗತ್ಯವಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಬಲೆ, ಅರವಳಿಕೆ ಔಷಧದೊಂದಿಗೆ ಸಜ್ಜಾಗಿದ್ದಾರೆ.
ಇನ್ಫೋಸಿಸ್ ಆವರಣ ಸುಮಾರು 350 ಎಕರೆಯಷ್ಟಿದ್ದು, ಕೆಲವು ಭಾಗ ಕಾಡಿನಂತೆಯೇ ಇದೆ. ಇಲ್ಲಿ ಕಾರ್ಯಾಚರಣೆ ಸಾಹಸವೇ ಸರಿ. ಆದರೂ ಕಾರ್ಯಾಚರಣೆ ನಡೆಯುತ್ತಿದೆ. ಚಿರತೆ ಸಮೀಪದ ವಸತಿ ಪ್ರದೇಶಗಳಿಗೆ ನುಗ್ಗದಂತೆ ಸಹ ಕ್ರಮ ವಹಿಸಲಾಗಿದೆ. ಚಿರತೆ ಪತ್ತೆಗೆ ಥರ್ಮಲ್ ಕ್ಯಾಮರಾ ಅಳವಡಿಸಿದ ಡ್ರೋನ್ ಸಹ ಬಳಸಲಾಗುತ್ತಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಶೀಘ್ರವೇ ಚಿರತೆ ಸೆರೆ ಹಿಡಿದು ಜನರ ಆತಂಕ ದೂರ ಮಾಡುತ್ತಾರೆ ಎಂಬ ವಿಶ್ವಾಸವನ್ನು ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು