12:29 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಸೋಲಾರ್ ಅಳವಡಿಸಿದರೆ ಕೇಂದ್ರದಿಂದ ಸಬ್ಸಿಡಿ: ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚನೆ

31/12/2024, 22:43

ಮಂಗಳೂರು(reporterkarnataka.com): ಮನೆಯ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಕೇಂದ್ರ ಸರಕಾರದಿಂದ ಗ್ರಾಹಕರಿಗೆ ಸಬ್ಸಿಡಿ ದೊರಕುತ್ತಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಕಾರ್ಯಾಗಾರದ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಯೋಜನೆಯಂತೆ ಸಾರ್ವಜನಿಕರು ತಮ್ಮ ಮನೆಯ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಸರಕಾರದಿಂದ ಸಬ್ಸಿಡಿ ದೊರಕಲಿದೆ. 1 ಕಿಲೋ ವ್ಯಾಟ್ ಗೆ ರೂ. 30 ಸಾವಿರ, 2 ಕಿಲೋ ವ್ಯಾಟ್ ರೂ.60 ಸಾವಿರ, 3 ಕಿಲೋ ವ್ಯಾಟ್ ಮೇಲ್ಪಟ್ಟ ಸೋಲಾರ್‍ಗಳಿಗೆ ರೂ. 78 ಸಾವಿರ ವರೆಗೆ ಸಬ್ಸಿಡಿ ದೊರಕಲಿದೆ ಎಂದು ಅವರು ತಿಳಿಸಿದರು.
ಈ ಸೋಲಾರ್ ಯೋಜನೆಯಿಂದ ಉತ್ಪತ್ತಿಯಾಗುವ ವಿದ್ಯುತ್‍ ಅನ್ನು ತಮ್ಮ ಮನೆಯ ಬಳಕೆಗೆ ಉಪಯೋಗಿಸಬಹುದು ಹಾಗೂ ಹೆಚ್ಚುವರಿ ವಿದ್ಯುತ್ ಅನ್ನು ಮೆಸ್ಕಾಂಗೆ ಮಾರಬಹುದಾಗಿದೆ ಎಂದು ಸಂಸದರು ತಿಳಿಸಿದರು.

ಮೆಸ್ಕಾಂ ವ್ಯವಸ್ಥಾಪನ ನಿರ್ದೇಶಕ ಜಯಕುಮಾರ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 675 ಜನರು ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಸೋಲಾರ್ ಉಪಕರಣಗಳ ಮಾರಾಟಕ್ಕೆ 270 ಡೀಲರ್‍ಗಳನ್ನು ಗುರುತಿಸಲಾಗಿದೆ.


ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮಾತನಾಡಿ ಸೋಲಾರ್ ಉಪಕರಣಗಳ ಖರೀದಿಗೆ ಬ್ಯಾಂಕ್ ಸಾಲ ನೀಡಲು ಬ್ಯಾಂಕುಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ ಮಾತನಾಡಿ ಪ್ರಧಾನಮಂತ್ರಿ ಸೋಲಾರ್ ಘರ್ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್ ಆನಂದ್, ಲೀಡ್ ಬ್ಯಾಂಕ್ ಮ್ಯಾನೇಜರ್ ಕವಿತಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು