1:22 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಸೋಲಾರ್ ಅಳವಡಿಸಿದರೆ ಕೇಂದ್ರದಿಂದ ಸಬ್ಸಿಡಿ: ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚನೆ

31/12/2024, 22:43

ಮಂಗಳೂರು(reporterkarnataka.com): ಮನೆಯ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಕೇಂದ್ರ ಸರಕಾರದಿಂದ ಗ್ರಾಹಕರಿಗೆ ಸಬ್ಸಿಡಿ ದೊರಕುತ್ತಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಕಾರ್ಯಾಗಾರದ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಯೋಜನೆಯಂತೆ ಸಾರ್ವಜನಿಕರು ತಮ್ಮ ಮನೆಯ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಸರಕಾರದಿಂದ ಸಬ್ಸಿಡಿ ದೊರಕಲಿದೆ. 1 ಕಿಲೋ ವ್ಯಾಟ್ ಗೆ ರೂ. 30 ಸಾವಿರ, 2 ಕಿಲೋ ವ್ಯಾಟ್ ರೂ.60 ಸಾವಿರ, 3 ಕಿಲೋ ವ್ಯಾಟ್ ಮೇಲ್ಪಟ್ಟ ಸೋಲಾರ್‍ಗಳಿಗೆ ರೂ. 78 ಸಾವಿರ ವರೆಗೆ ಸಬ್ಸಿಡಿ ದೊರಕಲಿದೆ ಎಂದು ಅವರು ತಿಳಿಸಿದರು.
ಈ ಸೋಲಾರ್ ಯೋಜನೆಯಿಂದ ಉತ್ಪತ್ತಿಯಾಗುವ ವಿದ್ಯುತ್‍ ಅನ್ನು ತಮ್ಮ ಮನೆಯ ಬಳಕೆಗೆ ಉಪಯೋಗಿಸಬಹುದು ಹಾಗೂ ಹೆಚ್ಚುವರಿ ವಿದ್ಯುತ್ ಅನ್ನು ಮೆಸ್ಕಾಂಗೆ ಮಾರಬಹುದಾಗಿದೆ ಎಂದು ಸಂಸದರು ತಿಳಿಸಿದರು.

ಮೆಸ್ಕಾಂ ವ್ಯವಸ್ಥಾಪನ ನಿರ್ದೇಶಕ ಜಯಕುಮಾರ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 675 ಜನರು ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಸೋಲಾರ್ ಉಪಕರಣಗಳ ಮಾರಾಟಕ್ಕೆ 270 ಡೀಲರ್‍ಗಳನ್ನು ಗುರುತಿಸಲಾಗಿದೆ.


ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮಾತನಾಡಿ ಸೋಲಾರ್ ಉಪಕರಣಗಳ ಖರೀದಿಗೆ ಬ್ಯಾಂಕ್ ಸಾಲ ನೀಡಲು ಬ್ಯಾಂಕುಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ ಮಾತನಾಡಿ ಪ್ರಧಾನಮಂತ್ರಿ ಸೋಲಾರ್ ಘರ್ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್ ಆನಂದ್, ಲೀಡ್ ಬ್ಯಾಂಕ್ ಮ್ಯಾನೇಜರ್ ಕವಿತಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು