1:45 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸೋಲಾರ್ ಅಳವಡಿಸಿದರೆ ಕೇಂದ್ರದಿಂದ ಸಬ್ಸಿಡಿ: ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚನೆ

31/12/2024, 22:43

ಮಂಗಳೂರು(reporterkarnataka.com): ಮನೆಯ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಕೇಂದ್ರ ಸರಕಾರದಿಂದ ಗ್ರಾಹಕರಿಗೆ ಸಬ್ಸಿಡಿ ದೊರಕುತ್ತಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಕಾರ್ಯಾಗಾರದ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಯೋಜನೆಯಂತೆ ಸಾರ್ವಜನಿಕರು ತಮ್ಮ ಮನೆಯ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಸಿದರೆ ಸರಕಾರದಿಂದ ಸಬ್ಸಿಡಿ ದೊರಕಲಿದೆ. 1 ಕಿಲೋ ವ್ಯಾಟ್ ಗೆ ರೂ. 30 ಸಾವಿರ, 2 ಕಿಲೋ ವ್ಯಾಟ್ ರೂ.60 ಸಾವಿರ, 3 ಕಿಲೋ ವ್ಯಾಟ್ ಮೇಲ್ಪಟ್ಟ ಸೋಲಾರ್‍ಗಳಿಗೆ ರೂ. 78 ಸಾವಿರ ವರೆಗೆ ಸಬ್ಸಿಡಿ ದೊರಕಲಿದೆ ಎಂದು ಅವರು ತಿಳಿಸಿದರು.
ಈ ಸೋಲಾರ್ ಯೋಜನೆಯಿಂದ ಉತ್ಪತ್ತಿಯಾಗುವ ವಿದ್ಯುತ್‍ ಅನ್ನು ತಮ್ಮ ಮನೆಯ ಬಳಕೆಗೆ ಉಪಯೋಗಿಸಬಹುದು ಹಾಗೂ ಹೆಚ್ಚುವರಿ ವಿದ್ಯುತ್ ಅನ್ನು ಮೆಸ್ಕಾಂಗೆ ಮಾರಬಹುದಾಗಿದೆ ಎಂದು ಸಂಸದರು ತಿಳಿಸಿದರು.

ಮೆಸ್ಕಾಂ ವ್ಯವಸ್ಥಾಪನ ನಿರ್ದೇಶಕ ಜಯಕುಮಾರ್ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 675 ಜನರು ಸೋಲಾರ್ ಯೋಜನೆ ಅಳವಡಿಸಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಅಡಿಯಲ್ಲಿ ಸೋಲಾರ್ ಉಪಕರಣಗಳ ಮಾರಾಟಕ್ಕೆ 270 ಡೀಲರ್‍ಗಳನ್ನು ಗುರುತಿಸಲಾಗಿದೆ.


ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮಾತನಾಡಿ ಸೋಲಾರ್ ಉಪಕರಣಗಳ ಖರೀದಿಗೆ ಬ್ಯಾಂಕ್ ಸಾಲ ನೀಡಲು ಬ್ಯಾಂಕುಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ ಮಾತನಾಡಿ ಪ್ರಧಾನಮಂತ್ರಿ ಸೋಲಾರ್ ಘರ್ ಯೋಜನೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್ ಆನಂದ್, ಲೀಡ್ ಬ್ಯಾಂಕ್ ಮ್ಯಾನೇಜರ್ ಕವಿತಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು