1:37 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ನೆಲಸಮ; ಕೂಲಿಗೆ ಹೋಗಿದ್ರಿಂದ ಯಜಮಾನ ಪಾರು

01/01/2025, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣ ನೆಲಸಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ‌.
ಮನೆ ಮಾಲೀಕ ಬಸಯ್ಯ ಹಿರೇಮಠ್ ಕೂಲಿಗೆ ಹೋಗಿದ್ರಿಂದ ಭಾರೀ ಅನಾಹುತದಿಂದ ಪಾರಾಗಿದ್ದಾರೆ.


ಸಿಲಿಂಡರ್ ಸಿಡಿದು ಸ್ಫೋಟಗೊಂಡ ರಭಸಕ್ಕೆ ಗುಡಿಸಲಿನಲ್ಲಿದ್ದ ವಸ್ತುಗಳು ಶೇ.100ಕ್ಕೆ 100ರಷ್ಟು ಸಟ್ಟು ಕರಕಲಾಗಿ ಇಡೀ ಗುಡಿಸಲಿದ್ದ ಜಾಗವೇ ಬೂದಿಮಯವಾಗಿದೆ. ಬಸಯ್ಯ ಹಿರೇಮಠ್ ಗೆ ಹೆಂಡತಿ-ಮಕ್ಕಳು ಯಾರೂ ಇಲ್ಲ. ಏಕಾಂಗಿಯಾಗಿ ಬದುಕುತ್ತಿರುವ ಹಿರೇಮಠ್ ಕೂಲಿ ಮಾಡಿಕೊಂಡು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದರು. ಇಂದು ಸ್ವತಃ ತಾನೇ ಅಡುಗೆ ಮಾಡಿ ಬೆಳಗ್ಗೆ ಊಟ ಮಾಡಿ ಮಧ್ಯಾಹ್ನದ ಊಟಕ್ಕೂ ಬಾಕ್ಸ್ ತೆಗೆದುಕೊಂಡು ಹೋಗಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ಸಿಲಿಂಡರ್ ಸಿಡಿದು ಇಡೀ ಗುಡಿಸಲೇ ಸರ್ವನಾಶವಾಗಿದೆ. ಒಂದು ವೇಳೆ ಸಿಲಿಂಡರ್ ಸ್ಫೋಟಗೊಳ್ಳುವ ವೇಳೆ ಗುಡಿಸಲು ಹಾಗೂ ಅಕ್ಕಪಕ್ಕ ಯಾರಾದರೂ ಇದ್ದಿದ್ದರೆ ಜೀವಹಾನಿಯೇ ಸಂಭವಿಸುತ್ತಿತ್ತು. ಆದರೆ, ಮಧ್ಯಾಹ್ನದ ವೇಳೆ ಆಗಿದ್ದರಿಂದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾದಂತಾಗಿದೆ. ವಿಷಯ ತಿಳಿದು ಕೂಲಿಯಿಂದ ವಾಪಸ್ ಬಂದ ಬಸ್ಸಯ್ಯ ಹಿರೇಮಠ್ ಮನೆ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಇದ್ದೊಂದು ಗುಡಿಸಲು ಬೆಂಕುಗಾಹುತಿಯಾಗಿದ್ದರಿಂದ ಅವರಿಗೆ ಮಲಗೋಕು ಜಾಗ ಇಲ್ಲದಂತಾಗಿದೆ. ಬಾಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಬಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು