12:25 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಗ್ಯಾಸ್ ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ನೆಲಸಮ; ಕೂಲಿಗೆ ಹೋಗಿದ್ರಿಂದ ಯಜಮಾನ ಪಾರು

01/01/2025, 21:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದಿಂದ ಮನೆ ಸಂಪೂರ್ಣ ನೆಲಸಮವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಕಂಬಳಿಹಾರ ಗ್ರಾಮದಲ್ಲಿ ನಡೆದಿದೆ‌.
ಮನೆ ಮಾಲೀಕ ಬಸಯ್ಯ ಹಿರೇಮಠ್ ಕೂಲಿಗೆ ಹೋಗಿದ್ರಿಂದ ಭಾರೀ ಅನಾಹುತದಿಂದ ಪಾರಾಗಿದ್ದಾರೆ.


ಸಿಲಿಂಡರ್ ಸಿಡಿದು ಸ್ಫೋಟಗೊಂಡ ರಭಸಕ್ಕೆ ಗುಡಿಸಲಿನಲ್ಲಿದ್ದ ವಸ್ತುಗಳು ಶೇ.100ಕ್ಕೆ 100ರಷ್ಟು ಸಟ್ಟು ಕರಕಲಾಗಿ ಇಡೀ ಗುಡಿಸಲಿದ್ದ ಜಾಗವೇ ಬೂದಿಮಯವಾಗಿದೆ. ಬಸಯ್ಯ ಹಿರೇಮಠ್ ಗೆ ಹೆಂಡತಿ-ಮಕ್ಕಳು ಯಾರೂ ಇಲ್ಲ. ಏಕಾಂಗಿಯಾಗಿ ಬದುಕುತ್ತಿರುವ ಹಿರೇಮಠ್ ಕೂಲಿ ಮಾಡಿಕೊಂಡು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದರು. ಇಂದು ಸ್ವತಃ ತಾನೇ ಅಡುಗೆ ಮಾಡಿ ಬೆಳಗ್ಗೆ ಊಟ ಮಾಡಿ ಮಧ್ಯಾಹ್ನದ ಊಟಕ್ಕೂ ಬಾಕ್ಸ್ ತೆಗೆದುಕೊಂಡು ಹೋಗಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ಸಿಲಿಂಡರ್ ಸಿಡಿದು ಇಡೀ ಗುಡಿಸಲೇ ಸರ್ವನಾಶವಾಗಿದೆ. ಒಂದು ವೇಳೆ ಸಿಲಿಂಡರ್ ಸ್ಫೋಟಗೊಳ್ಳುವ ವೇಳೆ ಗುಡಿಸಲು ಹಾಗೂ ಅಕ್ಕಪಕ್ಕ ಯಾರಾದರೂ ಇದ್ದಿದ್ದರೆ ಜೀವಹಾನಿಯೇ ಸಂಭವಿಸುತ್ತಿತ್ತು. ಆದರೆ, ಮಧ್ಯಾಹ್ನದ ವೇಳೆ ಆಗಿದ್ದರಿಂದ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾದಂತಾಗಿದೆ. ವಿಷಯ ತಿಳಿದು ಕೂಲಿಯಿಂದ ವಾಪಸ್ ಬಂದ ಬಸ್ಸಯ್ಯ ಹಿರೇಮಠ್ ಮನೆ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ. ಇದ್ದೊಂದು ಗುಡಿಸಲು ಬೆಂಕುಗಾಹುತಿಯಾಗಿದ್ದರಿಂದ ಅವರಿಗೆ ಮಲಗೋಕು ಜಾಗ ಇಲ್ಲದಂತಾಗಿದೆ. ಬಾಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಬಾಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು