7:51 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಎಚ್.ಡಿ.ಕೋಟೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ: ಪರಿಶೀಲನೆ

01/01/2025, 21:14

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಎಚ್. ಡಿ. ಕೋಟೆ ತಾಲೂಕಿನ ಆಹಾರ ಸುರಕ್ಷತಾ ಅಧಿಕಾರಿಗಳೂ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳೂ ಆದ ಟಿ. ರವಿಕುಮಾರ್ ಮತ್ತು ತಂಡದವರು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಹಾರ ಪರವಾನಗಿ (FSSA ಲೈಸೆನ್ಸ್ ) ಇಲ್ಲದೆ, ಹೋಟೆಲ್, ಬೇಕರಿ ಮತ್ತು ತಿಂಡಿ ಆಹಾರ ಪದಾರ್ಥಗಳನ್ನು ತಯಾರಿಸುವ ಅಂಗಡಿ ಮತ್ತು ಗೋಡೌನ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾಲೀಕರು ಮತ್ತು ವ್ಯಾಪಾರಸ್ಥರು ಗ್ರಾಹಕರಿಗೆ ಉತ್ತಮವಾದ ಮತ್ತು ಶುದ್ಧವಾದ ಒಳ್ಳೆ ಗುಣಮಟ್ಟದ ತಿಂಡಿ ಪದಾರ್ಥ ಮತ್ತು ಆಹಾರವನ್ನು ನೀಡಬೇಕು,ಯಾವುದೇ ಕಾರಣಕ್ಕೂ ನೆನ್ನೆ ಮೊನ್ನೆ ತಯಾರಿಸಿರುವ ತಿಂಡಿ ಪದಾರ್ಥಗಳು, ಆಹಾರವನ್ನು ನೀಡಬಾರದು, ತಿಂಡಿ ಮತ್ತು ಆಹಾರ ಪದಾರ್ ಗಳನ್ನು ಮಾಡಿದ ನಂತರ ಅವುಗಳನ್ನು ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಿಡಬೇಕು. ಯಾವುದೇ ಕಾರಣಕ್ಕೂ ನೊಣ ಮತ್ತು ಇನ್ನಿತರ ಕೀಟಗಳು ಕೂರದ ಹಾಗೆ ನೋಡಿಕೊಳ್ಳಬೇಕು, ಮತ್ತು ಆವಾಗ ಆವಾಗ ಜಾಗವನ್ನು ಫಿನಾಯಿಲ್ ನಿಂದ ಸ್ವಚ್ಛಗೊಳಿಸಬೇಕು, ಘನತ್ಯಾಜ್ಯಗಳನ್ನು ಗ್ರಾಮ ಪಂಚಾಯಿತಿಯವರು ನೇಮಿಸಿರುವ ವಾಹನಕ್ಕೆ ಮಾತ್ರ ನೀಡಬೇಕು,
ರಸ್ತೆ,ಬದಿ, ಕೆರೆ, ಕಟ್ಟೆ ,ನದಿಗಳಲ್ಲಿ ಬಿಸಾಡಬಾರದು ಹಾಗೂ ಎಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕಿನ ಎಲ್ಲಾ ಹೋಟೆಲ್ ಮತ್ತು ಬೇಕರಿ ಮಾಲೀಕರು, ಮತ್ತು ವ್ಯಾಪಾರಸ್ಥರು 1 ವಾರದ ಒಳಗೆ ಕಡ್ಡಾಯವಾಗಿ ಆಹಾರ ಪರವಾನಿಗೆ (ಲೈಸೆನ್ಸ್) ಪಡೆಯಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸ್ಥಳದಲ್ಲೇ ಸೂಚಿಸಿ ನೋಟಿಸ್ ನೀಡಿ ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್ , ಚೌಡ ನಾಯ್ಕ, ಮುಖಂಡರಾದ ಸುರೇಶ್ ಆರೋಗ್ಯ ನಿರೀಕ್ಷಣಾಧಿಕಾರಿ ರವಿರಾಜ್ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು