2:40 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಎಚ್.ಡಿ.ಕೋಟೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ: ಪರಿಶೀಲನೆ

01/01/2025, 21:14

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಎಚ್. ಡಿ. ಕೋಟೆ ತಾಲೂಕಿನ ಆಹಾರ ಸುರಕ್ಷತಾ ಅಧಿಕಾರಿಗಳೂ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳೂ ಆದ ಟಿ. ರವಿಕುಮಾರ್ ಮತ್ತು ತಂಡದವರು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಹಾರ ಪರವಾನಗಿ (FSSA ಲೈಸೆನ್ಸ್ ) ಇಲ್ಲದೆ, ಹೋಟೆಲ್, ಬೇಕರಿ ಮತ್ತು ತಿಂಡಿ ಆಹಾರ ಪದಾರ್ಥಗಳನ್ನು ತಯಾರಿಸುವ ಅಂಗಡಿ ಮತ್ತು ಗೋಡೌನ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾಲೀಕರು ಮತ್ತು ವ್ಯಾಪಾರಸ್ಥರು ಗ್ರಾಹಕರಿಗೆ ಉತ್ತಮವಾದ ಮತ್ತು ಶುದ್ಧವಾದ ಒಳ್ಳೆ ಗುಣಮಟ್ಟದ ತಿಂಡಿ ಪದಾರ್ಥ ಮತ್ತು ಆಹಾರವನ್ನು ನೀಡಬೇಕು,ಯಾವುದೇ ಕಾರಣಕ್ಕೂ ನೆನ್ನೆ ಮೊನ್ನೆ ತಯಾರಿಸಿರುವ ತಿಂಡಿ ಪದಾರ್ಥಗಳು, ಆಹಾರವನ್ನು ನೀಡಬಾರದು, ತಿಂಡಿ ಮತ್ತು ಆಹಾರ ಪದಾರ್ ಗಳನ್ನು ಮಾಡಿದ ನಂತರ ಅವುಗಳನ್ನು ಪ್ಲಾಸ್ಟಿಕ್ ಕವರ್ ನಿಂದ ಮುಚ್ಚಿಡಬೇಕು. ಯಾವುದೇ ಕಾರಣಕ್ಕೂ ನೊಣ ಮತ್ತು ಇನ್ನಿತರ ಕೀಟಗಳು ಕೂರದ ಹಾಗೆ ನೋಡಿಕೊಳ್ಳಬೇಕು, ಮತ್ತು ಆವಾಗ ಆವಾಗ ಜಾಗವನ್ನು ಫಿನಾಯಿಲ್ ನಿಂದ ಸ್ವಚ್ಛಗೊಳಿಸಬೇಕು, ಘನತ್ಯಾಜ್ಯಗಳನ್ನು ಗ್ರಾಮ ಪಂಚಾಯಿತಿಯವರು ನೇಮಿಸಿರುವ ವಾಹನಕ್ಕೆ ಮಾತ್ರ ನೀಡಬೇಕು,
ರಸ್ತೆ,ಬದಿ, ಕೆರೆ, ಕಟ್ಟೆ ,ನದಿಗಳಲ್ಲಿ ಬಿಸಾಡಬಾರದು ಹಾಗೂ ಎಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕಿನ ಎಲ್ಲಾ ಹೋಟೆಲ್ ಮತ್ತು ಬೇಕರಿ ಮಾಲೀಕರು, ಮತ್ತು ವ್ಯಾಪಾರಸ್ಥರು 1 ವಾರದ ಒಳಗೆ ಕಡ್ಡಾಯವಾಗಿ ಆಹಾರ ಪರವಾನಿಗೆ (ಲೈಸೆನ್ಸ್) ಪಡೆಯಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಸ್ಥಳದಲ್ಲೇ ಸೂಚಿಸಿ ನೋಟಿಸ್ ನೀಡಿ ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್ , ಚೌಡ ನಾಯ್ಕ, ಮುಖಂಡರಾದ ಸುರೇಶ್ ಆರೋಗ್ಯ ನಿರೀಕ್ಷಣಾಧಿಕಾರಿ ರವಿರಾಜ್ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು