7:05 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಬಿಕಾಂ ಪರೀಕ್ಷೆಯಲ್ಲಿ ರಾಮೇಶ್ವರ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ!: ಪಾಸ್ ಆಗಲು ಮುಖ್ಯ ಕಾರಣ ಆಯ್ತಾ ಕೆಎಎಸ್?

02/01/2025, 21:29

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಅತ್ಯಂತ ವೈಭವದಿಂದ ತೆರೆ ಬಿದ್ದಿದ್ದು, ಈ ಜಾತ್ರೆಯನ್ನು ಬಿಕಾಂ ಪರೀಕ್ಷೆ ಎಂದೇ ಬಿಂಬಿಸಲಾಗಿತ್ತು. ಈಗ ಆ ಬಿಕಾಂ ಪರೀಕ್ಷೆಯನ್ನು ರಾಮೇಶ್ವರನೂ ಪ್ರಥಮ ದರ್ಜೆಯಲ್ಲಿ ಉತ್ತಿರ್ಣನಾಗಿದ್ದಾನೆ.
ಹೌದು ಈ ಬಾರಿಯ ಜಾತ್ರೆ ಪಬ್ಲಿಕ್ ಪರೀಕ್ಷೆಗಿಂತಲೂ ಕಷ್ಟವಾಗಿತ್ತು. ಮೊದಲಿಗೆ ಪರೀಕ್ಷೆಗೆ ಓದಲು ಪುಸ್ತಕ ಕೊಟ್ಟಾಗಲೇ ಪುಸ್ತಕದ ಬಗ್ಗೆ ಗಲಾಟೆಯಾಗಿ ಎರಡು ಪುಸ್ತಕಗಳನ್ನು ಮಾಡಲಾಯಿತು. ಒಂದೇ ಪುಸ್ತಕ ಓದುವುದು ಕಷ್ಟ ಅಂತಹದರಲ್ಲಿ ಎರಡು ಪುಸ್ತಕ ಓದಿ ಪರೀಕ್ಷೆ ಪಾಸ್ ಆಗುವುದು ಅಷ್ಟು ಸುಲಭದ ಮಾತು ಆಗಿರಲಿಲ್ಲ. ಆದರೆ ಪರೀಕ್ಷೆ ಬರೆಯಲು ಕುಳಿತ ಮೇಲೆ ಪುಸ್ತಕದ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು ಎಂಬಂತೆ ಪರೀಕ್ಷೆಗೆ ತಯಾರಿ ಮಾಡಲಾಯಿತು.
ನಂತರ ಎರಡು ಪುಸ್ತಕದ ಪಾಠಗಳನ್ನು ಒಂದೇ ಪುಸ್ತಕಕ್ಕೆ ತರಲಾಯಿತು. ಆಗ ಅನಿಸಿದ್ದು ಈ ಬಿ.ಕಾಂ ಪರೀಕ್ಷೆ ಬೇಕಿತ್ತಾ ಎಂದು. ಆದರೆ ಇದ್ಯಾವುದಕ್ಕೂ ಜಗ್ಗದೆ ಪರೀಕ್ಷೆ ಬರೆಯಲು ಮುಂದಾದ ರಾಮೇಶ್ವರನು ತನ್ನ ಸಹಾಯಕ್ಕೆ ಕರೆಸಿಕೊಂಡಿದ್ದು ಕೆ. ಎ . ಎಸ್ ಓದಿದವರನ್ನು. ಬಿ. ಕಾಂ ಪಾಸ್ ಆಗಲು ಟ್ಯೂಷನ್ ಬೇಕೇ ಬೇಕು ಎಂದು ತೀರ್ಮಾನಿಸಿ ತೀರ್ಥಹಳ್ಳಿಗೆ ಕೆ. ಎ ಎಸ್ ತಂಡವೇ ಬಂತೋ ಆಗ ಪರೀಕ್ಷೆಗೆ ಮತ್ತಷ್ಟು ರೋಚಕತೆ ಬಂತು.
ಸ್ವತಃ ರಾಮೇಶ್ವರನೇ ಬಿಕಾಂ ಪರೀಕ್ಷೆ ಬರೆಯುತ್ತಾನೆ ಎಂದು ವಿಷಯ ತಿಳಿದ ಕುಟುಂಬಸ್ಥರು ಈ ಪರೀಕ್ಷೆ ಹೇಗಿರಲಿದೆ? ಪರೀಕ್ಷೆ ಪಾಸ್ ಆಗುತ್ತಾ? ಅಥವಾ ಪರೀಕ್ಷೆಗೆ ಯಾರಾದರೂ ಅಡ್ಡಿ ಪಡಿಸುತ್ತಾರ? ಎಂದು ಭಯ ಪಟ್ಟಿದ ರಾಮೇಶ್ವರನ ಕುಟುಂಬಸ್ಥರಿಗೆ ಕಡೆಗೂ ಸಮಾಧಾನ ತರುವ ವಿಷಯ ಸಿಕ್ಕಿದೆ. ಮೂರು ದಿನ ನಡೆದ ಮಹಾ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ ಹೊಂದುವ ಮೂಲಕ ಎಷ್ಟೇಷ್ಟೋ ಪರೀಕ್ಷೆ ಬರೆದಿದ್ದು ಬಿ. ಕಾಂ ಪರೀಕ್ಷೆ ಒಂದು ಲೆಕ್ಕವೇ ಎಂದು ರಾಮೇಶ್ವರನೇ ಹೇಳಿದಂತಿದೆ.

ಅದೇನೇ ಆಗಲಿ ರಾಮೇಶ್ವರನು ಬಿಕಾಂ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತಿರ್ಣವಾಗುವುದಕ್ಕೆ ಕೆ ಎ ಎಸ್ ತಂಡದವರ ಟ್ಯೂಷನ್ ಕೂಡ ಮುಖ್ಯವಾಗಿತ್ತು. ಮೂರು ದಿನಗಳ ಕಾಲ ರಾಮೇಶ್ವರನನ್ನು ಪಾಸ್ ಮಾಡಲು ಪಣ ತೊಟ್ಟು ಕಡೆಗೂ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ ಮಾಡಿ ಕೆ ಎ ಎಸ್ ತಂಡ ವಾಪಾಸ್ ಆಗಿದೆ.
ರಾಮೇಶ್ವರನ ಕುಟುಂಬದವರು ಕೆ ಎ ಎಸ್ ತಂಡಕ್ಕೆ ಹೃದಯ ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು