10:02 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಬಿಕಾಂ ಪರೀಕ್ಷೆಯಲ್ಲಿ ರಾಮೇಶ್ವರ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ!: ಪಾಸ್ ಆಗಲು ಮುಖ್ಯ ಕಾರಣ ಆಯ್ತಾ ಕೆಎಎಸ್?

02/01/2025, 21:29

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಅತ್ಯಂತ ವೈಭವದಿಂದ ತೆರೆ ಬಿದ್ದಿದ್ದು, ಈ ಜಾತ್ರೆಯನ್ನು ಬಿಕಾಂ ಪರೀಕ್ಷೆ ಎಂದೇ ಬಿಂಬಿಸಲಾಗಿತ್ತು. ಈಗ ಆ ಬಿಕಾಂ ಪರೀಕ್ಷೆಯನ್ನು ರಾಮೇಶ್ವರನೂ ಪ್ರಥಮ ದರ್ಜೆಯಲ್ಲಿ ಉತ್ತಿರ್ಣನಾಗಿದ್ದಾನೆ.
ಹೌದು ಈ ಬಾರಿಯ ಜಾತ್ರೆ ಪಬ್ಲಿಕ್ ಪರೀಕ್ಷೆಗಿಂತಲೂ ಕಷ್ಟವಾಗಿತ್ತು. ಮೊದಲಿಗೆ ಪರೀಕ್ಷೆಗೆ ಓದಲು ಪುಸ್ತಕ ಕೊಟ್ಟಾಗಲೇ ಪುಸ್ತಕದ ಬಗ್ಗೆ ಗಲಾಟೆಯಾಗಿ ಎರಡು ಪುಸ್ತಕಗಳನ್ನು ಮಾಡಲಾಯಿತು. ಒಂದೇ ಪುಸ್ತಕ ಓದುವುದು ಕಷ್ಟ ಅಂತಹದರಲ್ಲಿ ಎರಡು ಪುಸ್ತಕ ಓದಿ ಪರೀಕ್ಷೆ ಪಾಸ್ ಆಗುವುದು ಅಷ್ಟು ಸುಲಭದ ಮಾತು ಆಗಿರಲಿಲ್ಲ. ಆದರೆ ಪರೀಕ್ಷೆ ಬರೆಯಲು ಕುಳಿತ ಮೇಲೆ ಪುಸ್ತಕದ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು ಎಂಬಂತೆ ಪರೀಕ್ಷೆಗೆ ತಯಾರಿ ಮಾಡಲಾಯಿತು.
ನಂತರ ಎರಡು ಪುಸ್ತಕದ ಪಾಠಗಳನ್ನು ಒಂದೇ ಪುಸ್ತಕಕ್ಕೆ ತರಲಾಯಿತು. ಆಗ ಅನಿಸಿದ್ದು ಈ ಬಿ.ಕಾಂ ಪರೀಕ್ಷೆ ಬೇಕಿತ್ತಾ ಎಂದು. ಆದರೆ ಇದ್ಯಾವುದಕ್ಕೂ ಜಗ್ಗದೆ ಪರೀಕ್ಷೆ ಬರೆಯಲು ಮುಂದಾದ ರಾಮೇಶ್ವರನು ತನ್ನ ಸಹಾಯಕ್ಕೆ ಕರೆಸಿಕೊಂಡಿದ್ದು ಕೆ. ಎ . ಎಸ್ ಓದಿದವರನ್ನು. ಬಿ. ಕಾಂ ಪಾಸ್ ಆಗಲು ಟ್ಯೂಷನ್ ಬೇಕೇ ಬೇಕು ಎಂದು ತೀರ್ಮಾನಿಸಿ ತೀರ್ಥಹಳ್ಳಿಗೆ ಕೆ. ಎ ಎಸ್ ತಂಡವೇ ಬಂತೋ ಆಗ ಪರೀಕ್ಷೆಗೆ ಮತ್ತಷ್ಟು ರೋಚಕತೆ ಬಂತು.
ಸ್ವತಃ ರಾಮೇಶ್ವರನೇ ಬಿಕಾಂ ಪರೀಕ್ಷೆ ಬರೆಯುತ್ತಾನೆ ಎಂದು ವಿಷಯ ತಿಳಿದ ಕುಟುಂಬಸ್ಥರು ಈ ಪರೀಕ್ಷೆ ಹೇಗಿರಲಿದೆ? ಪರೀಕ್ಷೆ ಪಾಸ್ ಆಗುತ್ತಾ? ಅಥವಾ ಪರೀಕ್ಷೆಗೆ ಯಾರಾದರೂ ಅಡ್ಡಿ ಪಡಿಸುತ್ತಾರ? ಎಂದು ಭಯ ಪಟ್ಟಿದ ರಾಮೇಶ್ವರನ ಕುಟುಂಬಸ್ಥರಿಗೆ ಕಡೆಗೂ ಸಮಾಧಾನ ತರುವ ವಿಷಯ ಸಿಕ್ಕಿದೆ. ಮೂರು ದಿನ ನಡೆದ ಮಹಾ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ ಹೊಂದುವ ಮೂಲಕ ಎಷ್ಟೇಷ್ಟೋ ಪರೀಕ್ಷೆ ಬರೆದಿದ್ದು ಬಿ. ಕಾಂ ಪರೀಕ್ಷೆ ಒಂದು ಲೆಕ್ಕವೇ ಎಂದು ರಾಮೇಶ್ವರನೇ ಹೇಳಿದಂತಿದೆ.

ಅದೇನೇ ಆಗಲಿ ರಾಮೇಶ್ವರನು ಬಿಕಾಂ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತಿರ್ಣವಾಗುವುದಕ್ಕೆ ಕೆ ಎ ಎಸ್ ತಂಡದವರ ಟ್ಯೂಷನ್ ಕೂಡ ಮುಖ್ಯವಾಗಿತ್ತು. ಮೂರು ದಿನಗಳ ಕಾಲ ರಾಮೇಶ್ವರನನ್ನು ಪಾಸ್ ಮಾಡಲು ಪಣ ತೊಟ್ಟು ಕಡೆಗೂ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ ಮಾಡಿ ಕೆ ಎ ಎಸ್ ತಂಡ ವಾಪಾಸ್ ಆಗಿದೆ.
ರಾಮೇಶ್ವರನ ಕುಟುಂಬದವರು ಕೆ ಎ ಎಸ್ ತಂಡಕ್ಕೆ ಹೃದಯ ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು