11:08 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಿಕಾಂ ಪರೀಕ್ಷೆಯಲ್ಲಿ ರಾಮೇಶ್ವರ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ!: ಪಾಸ್ ಆಗಲು ಮುಖ್ಯ ಕಾರಣ ಆಯ್ತಾ ಕೆಎಎಸ್?

02/01/2025, 21:29

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಅತ್ಯಂತ ವೈಭವದಿಂದ ತೆರೆ ಬಿದ್ದಿದ್ದು, ಈ ಜಾತ್ರೆಯನ್ನು ಬಿಕಾಂ ಪರೀಕ್ಷೆ ಎಂದೇ ಬಿಂಬಿಸಲಾಗಿತ್ತು. ಈಗ ಆ ಬಿಕಾಂ ಪರೀಕ್ಷೆಯನ್ನು ರಾಮೇಶ್ವರನೂ ಪ್ರಥಮ ದರ್ಜೆಯಲ್ಲಿ ಉತ್ತಿರ್ಣನಾಗಿದ್ದಾನೆ.
ಹೌದು ಈ ಬಾರಿಯ ಜಾತ್ರೆ ಪಬ್ಲಿಕ್ ಪರೀಕ್ಷೆಗಿಂತಲೂ ಕಷ್ಟವಾಗಿತ್ತು. ಮೊದಲಿಗೆ ಪರೀಕ್ಷೆಗೆ ಓದಲು ಪುಸ್ತಕ ಕೊಟ್ಟಾಗಲೇ ಪುಸ್ತಕದ ಬಗ್ಗೆ ಗಲಾಟೆಯಾಗಿ ಎರಡು ಪುಸ್ತಕಗಳನ್ನು ಮಾಡಲಾಯಿತು. ಒಂದೇ ಪುಸ್ತಕ ಓದುವುದು ಕಷ್ಟ ಅಂತಹದರಲ್ಲಿ ಎರಡು ಪುಸ್ತಕ ಓದಿ ಪರೀಕ್ಷೆ ಪಾಸ್ ಆಗುವುದು ಅಷ್ಟು ಸುಲಭದ ಮಾತು ಆಗಿರಲಿಲ್ಲ. ಆದರೆ ಪರೀಕ್ಷೆ ಬರೆಯಲು ಕುಳಿತ ಮೇಲೆ ಪುಸ್ತಕದ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು ಎಂಬಂತೆ ಪರೀಕ್ಷೆಗೆ ತಯಾರಿ ಮಾಡಲಾಯಿತು.
ನಂತರ ಎರಡು ಪುಸ್ತಕದ ಪಾಠಗಳನ್ನು ಒಂದೇ ಪುಸ್ತಕಕ್ಕೆ ತರಲಾಯಿತು. ಆಗ ಅನಿಸಿದ್ದು ಈ ಬಿ.ಕಾಂ ಪರೀಕ್ಷೆ ಬೇಕಿತ್ತಾ ಎಂದು. ಆದರೆ ಇದ್ಯಾವುದಕ್ಕೂ ಜಗ್ಗದೆ ಪರೀಕ್ಷೆ ಬರೆಯಲು ಮುಂದಾದ ರಾಮೇಶ್ವರನು ತನ್ನ ಸಹಾಯಕ್ಕೆ ಕರೆಸಿಕೊಂಡಿದ್ದು ಕೆ. ಎ . ಎಸ್ ಓದಿದವರನ್ನು. ಬಿ. ಕಾಂ ಪಾಸ್ ಆಗಲು ಟ್ಯೂಷನ್ ಬೇಕೇ ಬೇಕು ಎಂದು ತೀರ್ಮಾನಿಸಿ ತೀರ್ಥಹಳ್ಳಿಗೆ ಕೆ. ಎ ಎಸ್ ತಂಡವೇ ಬಂತೋ ಆಗ ಪರೀಕ್ಷೆಗೆ ಮತ್ತಷ್ಟು ರೋಚಕತೆ ಬಂತು.
ಸ್ವತಃ ರಾಮೇಶ್ವರನೇ ಬಿಕಾಂ ಪರೀಕ್ಷೆ ಬರೆಯುತ್ತಾನೆ ಎಂದು ವಿಷಯ ತಿಳಿದ ಕುಟುಂಬಸ್ಥರು ಈ ಪರೀಕ್ಷೆ ಹೇಗಿರಲಿದೆ? ಪರೀಕ್ಷೆ ಪಾಸ್ ಆಗುತ್ತಾ? ಅಥವಾ ಪರೀಕ್ಷೆಗೆ ಯಾರಾದರೂ ಅಡ್ಡಿ ಪಡಿಸುತ್ತಾರ? ಎಂದು ಭಯ ಪಟ್ಟಿದ ರಾಮೇಶ್ವರನ ಕುಟುಂಬಸ್ಥರಿಗೆ ಕಡೆಗೂ ಸಮಾಧಾನ ತರುವ ವಿಷಯ ಸಿಕ್ಕಿದೆ. ಮೂರು ದಿನ ನಡೆದ ಮಹಾ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ ಹೊಂದುವ ಮೂಲಕ ಎಷ್ಟೇಷ್ಟೋ ಪರೀಕ್ಷೆ ಬರೆದಿದ್ದು ಬಿ. ಕಾಂ ಪರೀಕ್ಷೆ ಒಂದು ಲೆಕ್ಕವೇ ಎಂದು ರಾಮೇಶ್ವರನೇ ಹೇಳಿದಂತಿದೆ.

ಅದೇನೇ ಆಗಲಿ ರಾಮೇಶ್ವರನು ಬಿಕಾಂ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತಿರ್ಣವಾಗುವುದಕ್ಕೆ ಕೆ ಎ ಎಸ್ ತಂಡದವರ ಟ್ಯೂಷನ್ ಕೂಡ ಮುಖ್ಯವಾಗಿತ್ತು. ಮೂರು ದಿನಗಳ ಕಾಲ ರಾಮೇಶ್ವರನನ್ನು ಪಾಸ್ ಮಾಡಲು ಪಣ ತೊಟ್ಟು ಕಡೆಗೂ ಪ್ರಥಮ ದರ್ಜೆಯಲ್ಲಿ ಉತ್ತಿರ್ಣ ಮಾಡಿ ಕೆ ಎ ಎಸ್ ತಂಡ ವಾಪಾಸ್ ಆಗಿದೆ.
ರಾಮೇಶ್ವರನ ಕುಟುಂಬದವರು ಕೆ ಎ ಎಸ್ ತಂಡಕ್ಕೆ ಹೃದಯ ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು