6:51 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

‘ಬಾಲಿ’ ಎಂದೇ ಪ್ರಸಿದ್ದರಾಗಿದ್ದ ರಿದಂ ಕಿಂಗ್ ಬಾಲಸುಬ್ರಹ್ಮಣ್ಯಂ ನಿಧನ: ಕೆಎಫ್ ಎಂಎ ಸಂಸ್ಥೆ ತೀವ್ರ ಸಂತಾಪ

02/01/2025, 23:11

ಬೆಂಗಳೂರು(reporterkarnataka.com): ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಬಾಲಿ ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದವರು. ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಕೆ.ಎಫ್.ಎಂ.ಎ ಅಧ್ಯಕ್ಷರಾದ ಸಾಧುಕೋಕಿಲ ತಿಳಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ಮೃದಂಗ ಕಲಿಕೆ ಆರಂಭಿಸಿದ್ದ ಬಾಲಿ ಅವರು ಡೋಲಕ್, ಮೃದಗಂ, ತಬಲಾ ವಾದ್ಯಗಳನ್ನು ನುಡಿಸುವಲ್ಲೂ ಪರಿಣಿತರಾಗಿದ್ದರು. ಡ್ರಮ್ಸ್, ಬ್ಯಾಂಗೋ, ಕಾಂಗೋಸ್ ಗಳಲ್ಲಿ ಕೂಡ ಅವರಿಗೆ ಅಸಾಧಾರಣ ಪರಿಣಿತಿ ಇತ್ತು. ಸುಗಮ ಸಂಗೀತದ ಹಿರಿಯ ಕಲಾವಿದರಾದ ಬಾಳಪ್ಪ ಹುಕ್ಕೇರಿ, ಪಿ.ಕಾಳಿಂಗ ರಾವ್, ಮೈಸೂರು ಅನಂತ ಸ್ವಾಮಿ, ಸಿ.ಅಶ್ವತ್ಥ್ ಮೊದಲಾದವರ ಸಂಯೋಜನೆಯ ವಾದ್ಯಗೋಷ್ಟಿಗಳನ್ನು ಅವರು ನಿರ್ವಹಿಸಿದ್ದರು. ಕನ್ನಡದ ಮೊದಲ ಭಾವಗೀತೆಗಳ ಧ್ವನಿಮುದ್ರಿಕೆ ‘ನಿತ್ಯೋತ್ಸವ’ದಿಂದಲೂ ಅವರು ಸಕ್ರಿಯರಾಗಿದ್ದರು. ಜಿ.ಕೆ.ವೆಂಕಟೇಶ್, ವಿಜಯಭಾಸ್ಕರ್, ಎಂ.ರಂಗರಾವ್, ಡಾ.ರಾಜೀವ ತಾರಾನಾಥ್, ಅಶ್ವತ್ಥ್-ವೈದಿಯವರು ಸಂಯೋಜಿಸಿದ್ದ ಚಿತ್ರಗೀತೆಗಳಿಗೆ ಬಾಲಿ ಅವರು ಕೆಲಸ ಮಾಡಿದ್ದರು. ಶಂಕರ್ ನಾಗ್ ಅವರ ಸಂಕೇತ್ ಸ್ಟುಡಿಯೋ ನಿರ್ಮಾಣದಲ್ಲೂ ಬಾಲಿ ಅವರು ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದ್ದರು. ಹಿನ್ನೆಲೆ ಸಂಗೀತದ ಬಗ್ಗೆ ಅಡಿಯೋ-ವಿಡಿಯೋ-ಓದುವ ಹೀಗೆ ಮೂರು ಅಯಾಮದ ಪುಸ್ತಕವನ್ನು ಬರೆದಿದ್ದ ಬಾಲಿ ಅವರು ತಮ್ಮ ‘ರಮ್ಯ ಕಲ್ಚರಲ್ ಅಕಾಡಮಿ’ಯ ಮೂಲಕ ನೂರಾರು ಹೊಸ ಕಲಾವಿದರನ್ನು ರೂಪಿಸಿದ್ದರು. ಜೀ ಟಿವಿಯ ಜನಪ್ರಿಯ ಕಾರ್ಯಕ್ರಮ ‘ಸರಿಗಮಪ’ದ ತೀರ್ಪುಗಾರರ ಮಂಡಳಿಯಲ್ಲೂ ಬಾಲಿ ಅವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು