12:36 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬಳ್ಳಾರಿಯಲ್ಲಿ: ಜ.4,5ರಂದು ಜಿಲ್ಲಾ ಕಲಾ ವೈಭವ

02/01/2025, 23:23

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲಾ ಕಲಾವಿದರ ಸಂಘದಿಂದ ಇದೇ ಮೊದಲ ಬಾರಿಗೆ ನಗರದ ಡಾ.ಜೋಳದ ರಾಶಿ ದೊಡ್ಡನಗೌಡರ ರಂಗ ಮಂದಿರದಲ್ಲಿ ಜ.4 ಮತ್ತು 5 ರಂದು ಜಿಲ್ಲಾ ಕಲಾ ವೈಭವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ ಹೇಳಿದರು.
ನಗರದ ಸಾಂಸ್ಕೃತಿಕ ಸಮುಚ್ಚಯ ಆವರಣದ ಕನ್ನಡ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ‘ಜಿಲ್ಲೆಯ ಎಲ್ಲ ಕಲಾವಿದರನ್ನು ಒಗ್ಗೂಡಿಸುವುದು ಕಲಾ ವೈಭವದ ಉದ್ದೇಶವಾಗಿದೆ’ ಎಂದರು.
ಜ.4 ರಂದು ಬೆಳಗ್ಗೆ 9 ಗಂಟೆಗೆ ನಗರದ ರಾಘವ ಕಲಾಮಂದಿರದ ಬಳಿಯಿಂದ ವಸಂತ ವೈಭವ ಎನ್ನುವ ಕಲಾ ತಂಡಗಳ ಮೆರವಣಿಗೆ ನಡೆಯಲಿದೆ. ಪ್ರಥಮ ದರ್ಜೆ ಗುತ್ತಿಗೆದಾರ ಮಸೀದಿಪುರ ಸಿದ್ಧರಾಮನಗೌಡ ಮೆರವಣಿಗೆಗೆ ಚಾಲನೆ ನೀಡುವರು. ಮೆರವಣಿಗೆಯೂ ರಾಘವ ಕಲಾಮಂದಿರದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ತೇರು ಬೀದಿ, ಎಚ್.ಆರ್.ಗವಿಯಪ್ಪ ವೃತ್ತದ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ನಡೆಯಲಿದೆ. ಛದ್ಮವೇಷ, ಬಯಲಾಟ ವೇಷ, ಎತ್ತಿನಬಂಡಿ ಮೆರವಣಿಗೆ, ತಾಷಾರಾಂ ಡೋಲ್, ತೊಗಲುಗೊಂಬೆ ಸೇರಿ 30 ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ’ ಎಂದು ಅವರು ತಿಳಿಸಿದರು.
ಎಮ್ಮಿಗನೂರು ಹಂಪಿ ಸಾವಿರ ದೇವರಮಠದ ಶ್ರೀವಾಮದೇವ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಸಂಸದ ಈ. ತುಕಾರಂ ಉದ್ಘಾಟಿಸುವರು. ನಗರ ಶಾಸಕ ನಾರಾ ಭರತ್ ರೆಡ್ಡಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಭಾಗವಹಿಸುವರು. ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಜಿಲ್ಲಾ ಕಲಾವಿದರ ಸಂಘದ ಉಪಾಧ್ಯಕ್ಷೆ ವೀಣಾ ಕುಮಾರಿ, ಕಾರ್ಯದರ್ಶಿ ಎಚ್.ತಿಪ್ಪೇಸ್ವಾಮಿ, ಖಜಾಂಚಿ ರಮಣಪ್ಪ ಭಜಂತ್ರಿ, ಜಂಟಿ ಕಾರ್ಯದರ್ಶಿ ವೀರೇಶ್ ದಳವಾಯಿ, ಸುಬ್ಬಣ್ಣ, ಸದಸ್ಯ ಎಂ.ವಿನೋದ್ ಸೇರಿ ಹಲವು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು