11:10 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಕುಡಿಯಲು ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನೇ ಕೊಂದ ಕಿರಾತಕ: ನ್ಯೂ ಇಯರ್ ಸೆಲೆಬ್ರೇಷನ್ ಹಿನ್ನೆಲೆ ಕೃತ್ಯ?

03/01/2025, 10:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕುಡಿದು ಹೊಸ ವರ್ಷಾಚರಣೆ ಆಚರಿಸುವ ಮತ್ತಿನಲ್ಲಿ ಕುಡಿಯಲು ಹಣ ನೀಡಲು ನಿರಾಕರಿಸಿದ ಹಿನ್ನಲೆ ವ್ಯಕ್ತಿಯೊಬ್ಬರನ್ನ ನಡು ರಸ್ತೆಯಲ್ಲಿ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಪಟ್ಟಣದ ಸರಸ್ವತಿ ಕಾಲೋನಿಯಲ್ಲಿ ವಾಸವಿರುವ ಮಹದೇವನಗರದ ನಿವಾಸಿ ಆಟೋ ಡ್ರೈವರ್ ರಫೀಕ್ ಪಾಷ (40) ಎಂಬುವವರೆ ಮೃತ ದುರ್ದೈವಿ.
ಹೊಸ ವರ್ಷದ ಮೊದಲ ದಿನ ಬುಧವಾರ ರಫೀಕ್ ರವರು ಸರಸ್ವತಿ ಕಾಲೋನಿಯಲ್ಲಿರುವ ತಮ್ಮ ಮನೆಗೆ ತಡರಾತ್ರಿಯಲ್ಲಿ ನಡೆದು ಹೋಗುತ್ತಿದ್ದಾಗ ನೀಲಕಂಠನಗರದ ನಿವಾಸಿ ಸಲೀಂ ತನ್ನ ಸ್ನೇಹಿತನ ಜೊತೆ ಬಂದು ಕುಡಿಯಲು ಹಣ ಕೊಡುವಂತೆ ರಫೀಕ್ ಅವರನ್ನು ಪೀಡಿಸಿದ್ದಾನೆ.
ಹಣ ಕೊಡಲು ರಫೀಕ್ ನಿರಾಕರಿಸಿದ್ದಾರೆ. ಈ ವೇಳೆ ಸಲೀಂ ಹಾಗೂ ಸ್ನೇಹಿತ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರಫೀಕ್ ರನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ರಫೀಕ್ ಗುರುವಾರ ಮೃತಪಟ್ಟಿದ್ದಾರೆ
ಬಿಯರ್ ಬಾಟಲಿನಿಂದ ಹಲ್ಲೆ ನಡೆಸಿ ಕೊಲೆಗೆ ಕಾರಣರಾದ ನೀಲಕಂಠ ನಗರದ ನಿವಾಸಿ ಸಲೀಂ ಹಾಗೂ ಆತನ ಸ್ನೇಹಿತ ಪರಾರಿಯಾಗಿದ್ದಾರೆ.bಮೃತನ ಸಹೋದರ ಸಮೀವುಲ್ಲಾ ನಂಜನಗೂಡು ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು