2:39 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಕುಡಿಯಲು ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನೇ ಕೊಂದ ಕಿರಾತಕ: ನ್ಯೂ ಇಯರ್ ಸೆಲೆಬ್ರೇಷನ್ ಹಿನ್ನೆಲೆ ಕೃತ್ಯ?

03/01/2025, 10:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕುಡಿದು ಹೊಸ ವರ್ಷಾಚರಣೆ ಆಚರಿಸುವ ಮತ್ತಿನಲ್ಲಿ ಕುಡಿಯಲು ಹಣ ನೀಡಲು ನಿರಾಕರಿಸಿದ ಹಿನ್ನಲೆ ವ್ಯಕ್ತಿಯೊಬ್ಬರನ್ನ ನಡು ರಸ್ತೆಯಲ್ಲಿ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಪಟ್ಟಣದ ಸರಸ್ವತಿ ಕಾಲೋನಿಯಲ್ಲಿ ವಾಸವಿರುವ ಮಹದೇವನಗರದ ನಿವಾಸಿ ಆಟೋ ಡ್ರೈವರ್ ರಫೀಕ್ ಪಾಷ (40) ಎಂಬುವವರೆ ಮೃತ ದುರ್ದೈವಿ.
ಹೊಸ ವರ್ಷದ ಮೊದಲ ದಿನ ಬುಧವಾರ ರಫೀಕ್ ರವರು ಸರಸ್ವತಿ ಕಾಲೋನಿಯಲ್ಲಿರುವ ತಮ್ಮ ಮನೆಗೆ ತಡರಾತ್ರಿಯಲ್ಲಿ ನಡೆದು ಹೋಗುತ್ತಿದ್ದಾಗ ನೀಲಕಂಠನಗರದ ನಿವಾಸಿ ಸಲೀಂ ತನ್ನ ಸ್ನೇಹಿತನ ಜೊತೆ ಬಂದು ಕುಡಿಯಲು ಹಣ ಕೊಡುವಂತೆ ರಫೀಕ್ ಅವರನ್ನು ಪೀಡಿಸಿದ್ದಾನೆ.
ಹಣ ಕೊಡಲು ರಫೀಕ್ ನಿರಾಕರಿಸಿದ್ದಾರೆ. ಈ ವೇಳೆ ಸಲೀಂ ಹಾಗೂ ಸ್ನೇಹಿತ ಬಿಯರ್ ಬಾಟೆಲ್ ನಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರಫೀಕ್ ರನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ರಫೀಕ್ ಗುರುವಾರ ಮೃತಪಟ್ಟಿದ್ದಾರೆ
ಬಿಯರ್ ಬಾಟಲಿನಿಂದ ಹಲ್ಲೆ ನಡೆಸಿ ಕೊಲೆಗೆ ಕಾರಣರಾದ ನೀಲಕಂಠ ನಗರದ ನಿವಾಸಿ ಸಲೀಂ ಹಾಗೂ ಆತನ ಸ್ನೇಹಿತ ಪರಾರಿಯಾಗಿದ್ದಾರೆ.bಮೃತನ ಸಹೋದರ ಸಮೀವುಲ್ಲಾ ನಂಜನಗೂಡು ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು