11:13 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಯುವಕನ ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಧರ್ಮದೇಟು

03/01/2025, 15:50

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಪತಿಯನ್ನ ಕಳೆದುಕೊಂಡ ವಿಧವೆಯೊಬ್ಬರ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹರ್ಷ ಎಂಬಾತನೇ ಕಳ್ಳತನಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ ಯುವಕ.
ಸಿಕ್ಕಿಬಿದ್ದ ಯುವಕನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬೊಕ್ಕಹಳ್ಳಿ ಗ್ರಾಮದ ಮಂಜುಳ ನಾಲ್ಕು ತಿಂಗಳ ಹಿಂದೆ ಪತಿ ಶಿವಕುಮಾರ್ ರನ್ನ ಕಳೆದುಕೊಂಡು ಜೀವನೋಪಾಯಕ್ಕಾಗಿ ಮೈಸೂರಿನ ಬಿಸಿಎಂ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ. ಇವರಿಗೆ ಇದ್ದ ಒಂದು ಎಕ್ರೆ ಜಮೀನನ್ನ ಭೋಗ್ಯಕ್ಕೆ ಹಾಕಿದ ಪರಿಣಾಮ ಮನೆಯಲ್ಲಿ 3 ಲಕ್ಷ ನಗದು ಇಟ್ಟುಕೊಂಡಿದ್ದಾರೆ ಎಂಬ ಮಾಹಿತಿ ಅರಿತಿದ್ದ ಹರ್ಷ ಜನವರಿ 1ರ ಮಧ್ಯರಾತ್ರಿ ಮನೆಗೆ ನುಗ್ಗಿದ್ದಾನೆ.
ಶಬ್ದವಾದ ಹಿನ್ನಲೆ ಮಂಗಳಾ ಎಚ್ಚರಗೊಂಡು ಪರಿಶೀಲಿಸಿದಾಗ ಅತ್ತೆ ಚಿನ್ನಮ್ಮ ಮಲಗಿದ್ದ ಮಂಚದ ಕೆಳಗೆ ಹರ್ಷ ಅವಿತುಕೊಂಡಿರುವುದು ಗೊತ್ತಾಗಿದೆ.


ಯುವಕನನ್ನ ಹಿಡಿದಾಗ ಮಂಗಳಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆಯ ಅಂಗಾಂಗಗಳನ್ನ ಮುಟ್ಟಿ ಪರಾರಿಯಾಗಿದ್ದಾನೆ.
ಈ ವಿಚಾರ ಗ್ರಾಮಸ್ಥರಿಗೆ ತಿಳಿಸಿದಾಗ ಹರ್ಷನನ್ನು ಪತ್ತೆ ಹಚ್ಚಿ ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ. ಹಣ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾಗಿ ಹರ್ಷ ಒಪ್ಪಿಕೊಂಡಿದ್ದಾನೆ.
ಬಳಿಕ ಮಂಗಳಾ ಅವರು ನಂಜನಗೂಡು ಗ್ರಾಮಾಂತರ ಠಾಣೆಗೆ ದೂರು ನೀಡಿದ ಹಿನ್ನೆಲೆ ಪೊಲೀಸರು ಹರ್ಷನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು