6:18 PM Friday19 - December 2025
ಬ್ರೇಕಿಂಗ್ ನ್ಯೂಸ್
Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

ಇತ್ತೀಚಿನ ಸುದ್ದಿ

ಕಳ್ಳತನ ಮಾಡಲು ಬಂದು ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಯುವಕನ ಕಂಬಕ್ಕೆ ಕಟ್ಟಿ ಗ್ರಾಮಸ್ಥರಿಂದ ಧರ್ಮದೇಟು

03/01/2025, 15:50

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಪತಿಯನ್ನ ಕಳೆದುಕೊಂಡ ವಿಧವೆಯೊಬ್ಬರ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಸಿಕ್ಕಿಬಿದ್ದ ಘಟನೆ ನಂಜನಗೂಡು ತಾಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹರ್ಷ ಎಂಬಾತನೇ ಕಳ್ಳತನಕ್ಕೆ ಯತ್ನಿಸಿ ಅಸಭ್ಯವಾಗಿ ವರ್ತಿಸಿದ ಯುವಕ.
ಸಿಕ್ಕಿಬಿದ್ದ ಯುವಕನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿಹಾಕಿ ಥಳಿಸಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬೊಕ್ಕಹಳ್ಳಿ ಗ್ರಾಮದ ಮಂಜುಳ ನಾಲ್ಕು ತಿಂಗಳ ಹಿಂದೆ ಪತಿ ಶಿವಕುಮಾರ್ ರನ್ನ ಕಳೆದುಕೊಂಡು ಜೀವನೋಪಾಯಕ್ಕಾಗಿ ಮೈಸೂರಿನ ಬಿಸಿಎಂ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಾರೆ. ಇವರಿಗೆ ಇದ್ದ ಒಂದು ಎಕ್ರೆ ಜಮೀನನ್ನ ಭೋಗ್ಯಕ್ಕೆ ಹಾಕಿದ ಪರಿಣಾಮ ಮನೆಯಲ್ಲಿ 3 ಲಕ್ಷ ನಗದು ಇಟ್ಟುಕೊಂಡಿದ್ದಾರೆ ಎಂಬ ಮಾಹಿತಿ ಅರಿತಿದ್ದ ಹರ್ಷ ಜನವರಿ 1ರ ಮಧ್ಯರಾತ್ರಿ ಮನೆಗೆ ನುಗ್ಗಿದ್ದಾನೆ.
ಶಬ್ದವಾದ ಹಿನ್ನಲೆ ಮಂಗಳಾ ಎಚ್ಚರಗೊಂಡು ಪರಿಶೀಲಿಸಿದಾಗ ಅತ್ತೆ ಚಿನ್ನಮ್ಮ ಮಲಗಿದ್ದ ಮಂಚದ ಕೆಳಗೆ ಹರ್ಷ ಅವಿತುಕೊಂಡಿರುವುದು ಗೊತ್ತಾಗಿದೆ.


ಯುವಕನನ್ನ ಹಿಡಿದಾಗ ಮಂಗಳಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಆಕೆಯ ಅಂಗಾಂಗಗಳನ್ನ ಮುಟ್ಟಿ ಪರಾರಿಯಾಗಿದ್ದಾನೆ.
ಈ ವಿಚಾರ ಗ್ರಾಮಸ್ಥರಿಗೆ ತಿಳಿಸಿದಾಗ ಹರ್ಷನನ್ನು ಪತ್ತೆ ಹಚ್ಚಿ ಕಂಬಕ್ಕೆ ಕಟ್ಟಿಹಾಕಿ ಧರ್ಮದೇಟು ನೀಡಿದ್ದಾರೆ. ಹಣ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾಗಿ ಹರ್ಷ ಒಪ್ಪಿಕೊಂಡಿದ್ದಾನೆ.
ಬಳಿಕ ಮಂಗಳಾ ಅವರು ನಂಜನಗೂಡು ಗ್ರಾಮಾಂತರ ಠಾಣೆಗೆ ದೂರು ನೀಡಿದ ಹಿನ್ನೆಲೆ ಪೊಲೀಸರು ಹರ್ಷನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು