3:32 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲೆ: ಮೂವರು ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

03/01/2025, 15:52

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterlarnataka@gmail.com

ಜಿಲ್ಲೆಯ ಹಿರಿಯ ಪತ್ರಕರ್ತರಾದ ವಾಸುದೇವ ಹೊಳ್ಳ, ಹಾಬಿ ರಮೇಶ್‌ ಹಾಗೂ ‘ಪ್ರಜಾವಾಣಿ’ ಜಿಲ್ಲಾ ವರದಿಗಾರ ಕೆ.ಓಂಕಾರ ಮೂರ್ತಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅಕಾಡೆಮಿ ಅಧ್ಯಕ್ಷರು ಗುರುವಾರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ವಾಸುದೇವ ಹೊಳ್ಳ ಅವರಿಗೆ 2023ನೇ ಸಾಲಿನ ‘ವಾರ್ಷಿಕ ಪ್ರಶಸ್ತಿ’ ಹಾಗೂ ಹಾಬಿ ರಮೇಶ್‌ ಅವರಿಗೆ 2024ನೇ ಸಾಲಿನ ‘ವಾರ್ಷಿಕ ಪ್ರಶಸ್ತಿ’ ಒಲಿದಿದೆ.
ಓಂಕಾರ ಮೂರ್ತಿ ಅವರು ಅಕಾಡೆಮಿಯ 2024ನೇ ಸಾಲಿನ ‘ಅಭಿಮಾನಿ ದತ್ತಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ‘ಕೆರೆ ಒಡಲಿಗೆ ಬೆಂಗಳೂರಿನ ಚರಂಡಿ ನೀರು; ತರಕಾರಿ ಗುಣಮಟ್ಟ ಕುಸಿತ, ಅವಳಿ ವ್ಯಾಲಿಯಲ್ಲಿ ಅಪಾಯ’ ವಿಶೇಷ ವರದಿಗೆ ಈ ಪ್ರಶಸ್ತಿ ಒಲಿದಿದೆ.
ಪ್ರಶಸ್ತಿ ಪುರಸ್ಕೃತರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್‌, ಪ್ರಧಾನ ಕಾರ್ಯದರ್ಶಿ ಎಸ್‌.ಕೆ.ಚಂದ್ರಶೇಖರ್‌, ಖಜಾಂಚಿ ಎ.ಜಿ.ಸುರೇಶ್‌ ಕುಮಾರ್‌ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೆ.ಎಸ್.ಗಣೇಶ್, ವಿ.ಮುನಿರಾಜು ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು