8:23 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ‘ಸದ್ಧರ್ಮಗೀತ’ ನಾಲ್ಕು ಕಾವ್ಯ ಕಥನಗಳ ಗುಚ್ಛ ಕೃತಿ ಲೋಕಾರ್ಪಣೆ

03/01/2025, 23:50

ಬೆಂಗಳೂರು( reporterkarnataka.com):ಹಿರಿಯ ಐಎಎಸ್ ಅಧಿಕಾರಿ ರಾಜ್ಯ ಸರ್ಕಾರದ ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ನೂತನ ಕೃತಿ ‘ಸದ್ಧರ್ಮಗೀತ ‘ ನಾಲ್ಕು ಕಾವ್ಯಕಥನಗಳ ಗುಚ್ಛ ಲೋಕಾರ್ಪಣೆ ಸಮಾರಂಭವನ್ನು ನಗರದ ಇನ್ಫೆಂಟ್ರಿ ರಸ್ತೆಯ ಐಎಎಸ್ ಅಧಿಕಾರಿಗಳ ಸಂಘದಲ್ಲಿ ಆಯೋಜಿಸಲಾಗಿತ್ತು.
ಸೆಂಟರ್ ಫಾರ್ ಸಸ್ಟೈನೆಬಲ್ ಡೆವಲಪ್ಮೆಂಟ್ ಮತ್ತು ಐಎಎಸ್ ಅಧಿಕಾರಿಗಳ ಸಂಘ ಸಹಯೋಗದಲ್ಲಿ ಏರ್ಪಡಿಸಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಜಸ್ಟಿಸ್ ಶಿವರಾಜ ವಿ. ಪಾಟೀಲ್ ವಹಿಸಿ ಕೃ ತಿ ಲೋಕಾರ್ಪಣೆ ಮಾಡಿ ಮಾತನಾಡುತ್ತ ಕಾವ್ಯಕ್ಕೆ ಚುಂಬಕ ಶಕ್ತಿ ಉಂಟು. ಅದು ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತದೆ. ಭಾವಯತ್ರಿ ಪ್ರತಿಭೆವುಳ್ಳವರು ಕೂಡ ಕಾವ್ಯ ರಚನೆಗೆ ಕೈ ಹಾಕಿದವರುಂಟು, ಅಂತಹವರು ಕಾರಯಿತ್ರಿಯ ಕೈಯನ್ನು ಹಿಡಿಯುತ್ತಾರೆ. ಡಾ.ಎ ರವೀಂದ್ರರವರು ಈ ಸಾಲಿಗೆ ಸೇರಿದವರು . ಲೌಕಿಕ ಜ್ಞಾನ ಭಾಷೆ ಇಂಗ್ಲಿಷ್, ಮಾತೃಭಾಷೆ ತೆಲುಗು, ಹೃದಯದ ಭಾಷೆಯಾಗಿ ಕನ್ನಡದಲ್ಲಿ ಕಾವ್ಯ ಸಂವೇದನೆ ಇರುವ ವೈಚಾರಿಕ ಕಾವ್ಯ ‘ಸದ್ಧರ್ಮ ಗೀತ’ ನಮ್ಮ ಮುಂದೆ ಇಟ್ಟಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ ವೆಂಕಟೇಶರವರು ಕೃತಿ ಕುರಿತು ಇದು ಭಗವದ್ಗೀತೆಯಲ್ಲ ಬದಲಾಗಿ ಜೀವನದ ಆಕೃತಿಯ ಧರ್ಮ ವಿಚಾರಕ್ಕೆ ಸಂಬಂಧಿಸಿದ್ದು. ಇಲ್ಲಿ ಬುದ್ಧ ಧರ್ಮ, ಬಸವ ಧರ್ಮ ಮತ್ತು ಅಂಬೇಡ್ಕರ್ ಧರ್ಮ ಒಂದಲ್ಲೊಂದು ತಳಕು ಹಾಕಿಕೊಂಡಿದೆ. ಸರಳವೂ ಅರ್ಥ ಗುಂಫನವು ಆದ ಗಪದ್ಯವೆಂಬ ಕಥನದಲ್ಲಿ ತಮ್ಮ ಕಾವ್ಯ ರಚನೆಯನ್ನು ಹೆಣೆದಿದ್ದಾರೆ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು