1:21 PM Saturday11 - October 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ…

ಇತ್ತೀಚಿನ ಸುದ್ದಿ

ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ‘ಸದ್ಧರ್ಮಗೀತ’ ನಾಲ್ಕು ಕಾವ್ಯ ಕಥನಗಳ ಗುಚ್ಛ ಕೃತಿ ಲೋಕಾರ್ಪಣೆ

03/01/2025, 23:50

ಬೆಂಗಳೂರು( reporterkarnataka.com):ಹಿರಿಯ ಐಎಎಸ್ ಅಧಿಕಾರಿ ರಾಜ್ಯ ಸರ್ಕಾರದ ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ನೂತನ ಕೃತಿ ‘ಸದ್ಧರ್ಮಗೀತ ‘ ನಾಲ್ಕು ಕಾವ್ಯಕಥನಗಳ ಗುಚ್ಛ ಲೋಕಾರ್ಪಣೆ ಸಮಾರಂಭವನ್ನು ನಗರದ ಇನ್ಫೆಂಟ್ರಿ ರಸ್ತೆಯ ಐಎಎಸ್ ಅಧಿಕಾರಿಗಳ ಸಂಘದಲ್ಲಿ ಆಯೋಜಿಸಲಾಗಿತ್ತು.
ಸೆಂಟರ್ ಫಾರ್ ಸಸ್ಟೈನೆಬಲ್ ಡೆವಲಪ್ಮೆಂಟ್ ಮತ್ತು ಐಎಎಸ್ ಅಧಿಕಾರಿಗಳ ಸಂಘ ಸಹಯೋಗದಲ್ಲಿ ಏರ್ಪಡಿಸಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಜಸ್ಟಿಸ್ ಶಿವರಾಜ ವಿ. ಪಾಟೀಲ್ ವಹಿಸಿ ಕೃ ತಿ ಲೋಕಾರ್ಪಣೆ ಮಾಡಿ ಮಾತನಾಡುತ್ತ ಕಾವ್ಯಕ್ಕೆ ಚುಂಬಕ ಶಕ್ತಿ ಉಂಟು. ಅದು ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತದೆ. ಭಾವಯತ್ರಿ ಪ್ರತಿಭೆವುಳ್ಳವರು ಕೂಡ ಕಾವ್ಯ ರಚನೆಗೆ ಕೈ ಹಾಕಿದವರುಂಟು, ಅಂತಹವರು ಕಾರಯಿತ್ರಿಯ ಕೈಯನ್ನು ಹಿಡಿಯುತ್ತಾರೆ. ಡಾ.ಎ ರವೀಂದ್ರರವರು ಈ ಸಾಲಿಗೆ ಸೇರಿದವರು . ಲೌಕಿಕ ಜ್ಞಾನ ಭಾಷೆ ಇಂಗ್ಲಿಷ್, ಮಾತೃಭಾಷೆ ತೆಲುಗು, ಹೃದಯದ ಭಾಷೆಯಾಗಿ ಕನ್ನಡದಲ್ಲಿ ಕಾವ್ಯ ಸಂವೇದನೆ ಇರುವ ವೈಚಾರಿಕ ಕಾವ್ಯ ‘ಸದ್ಧರ್ಮ ಗೀತ’ ನಮ್ಮ ಮುಂದೆ ಇಟ್ಟಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ ವೆಂಕಟೇಶರವರು ಕೃತಿ ಕುರಿತು ಇದು ಭಗವದ್ಗೀತೆಯಲ್ಲ ಬದಲಾಗಿ ಜೀವನದ ಆಕೃತಿಯ ಧರ್ಮ ವಿಚಾರಕ್ಕೆ ಸಂಬಂಧಿಸಿದ್ದು. ಇಲ್ಲಿ ಬುದ್ಧ ಧರ್ಮ, ಬಸವ ಧರ್ಮ ಮತ್ತು ಅಂಬೇಡ್ಕರ್ ಧರ್ಮ ಒಂದಲ್ಲೊಂದು ತಳಕು ಹಾಕಿಕೊಂಡಿದೆ. ಸರಳವೂ ಅರ್ಥ ಗುಂಫನವು ಆದ ಗಪದ್ಯವೆಂಬ ಕಥನದಲ್ಲಿ ತಮ್ಮ ಕಾವ್ಯ ರಚನೆಯನ್ನು ಹೆಣೆದಿದ್ದಾರೆ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು