2:32 AM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ‘ಸದ್ಧರ್ಮಗೀತ’ ನಾಲ್ಕು ಕಾವ್ಯ ಕಥನಗಳ ಗುಚ್ಛ ಕೃತಿ ಲೋಕಾರ್ಪಣೆ

03/01/2025, 23:50

ಬೆಂಗಳೂರು( reporterkarnataka.com):ಹಿರಿಯ ಐಎಎಸ್ ಅಧಿಕಾರಿ ರಾಜ್ಯ ಸರ್ಕಾರದ ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ನೂತನ ಕೃತಿ ‘ಸದ್ಧರ್ಮಗೀತ ‘ ನಾಲ್ಕು ಕಾವ್ಯಕಥನಗಳ ಗುಚ್ಛ ಲೋಕಾರ್ಪಣೆ ಸಮಾರಂಭವನ್ನು ನಗರದ ಇನ್ಫೆಂಟ್ರಿ ರಸ್ತೆಯ ಐಎಎಸ್ ಅಧಿಕಾರಿಗಳ ಸಂಘದಲ್ಲಿ ಆಯೋಜಿಸಲಾಗಿತ್ತು.
ಸೆಂಟರ್ ಫಾರ್ ಸಸ್ಟೈನೆಬಲ್ ಡೆವಲಪ್ಮೆಂಟ್ ಮತ್ತು ಐಎಎಸ್ ಅಧಿಕಾರಿಗಳ ಸಂಘ ಸಹಯೋಗದಲ್ಲಿ ಏರ್ಪಡಿಸಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಜಸ್ಟಿಸ್ ಶಿವರಾಜ ವಿ. ಪಾಟೀಲ್ ವಹಿಸಿ ಕೃ ತಿ ಲೋಕಾರ್ಪಣೆ ಮಾಡಿ ಮಾತನಾಡುತ್ತ ಕಾವ್ಯಕ್ಕೆ ಚುಂಬಕ ಶಕ್ತಿ ಉಂಟು. ಅದು ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತದೆ. ಭಾವಯತ್ರಿ ಪ್ರತಿಭೆವುಳ್ಳವರು ಕೂಡ ಕಾವ್ಯ ರಚನೆಗೆ ಕೈ ಹಾಕಿದವರುಂಟು, ಅಂತಹವರು ಕಾರಯಿತ್ರಿಯ ಕೈಯನ್ನು ಹಿಡಿಯುತ್ತಾರೆ. ಡಾ.ಎ ರವೀಂದ್ರರವರು ಈ ಸಾಲಿಗೆ ಸೇರಿದವರು . ಲೌಕಿಕ ಜ್ಞಾನ ಭಾಷೆ ಇಂಗ್ಲಿಷ್, ಮಾತೃಭಾಷೆ ತೆಲುಗು, ಹೃದಯದ ಭಾಷೆಯಾಗಿ ಕನ್ನಡದಲ್ಲಿ ಕಾವ್ಯ ಸಂವೇದನೆ ಇರುವ ವೈಚಾರಿಕ ಕಾವ್ಯ ‘ಸದ್ಧರ್ಮ ಗೀತ’ ನಮ್ಮ ಮುಂದೆ ಇಟ್ಟಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ ವೆಂಕಟೇಶರವರು ಕೃತಿ ಕುರಿತು ಇದು ಭಗವದ್ಗೀತೆಯಲ್ಲ ಬದಲಾಗಿ ಜೀವನದ ಆಕೃತಿಯ ಧರ್ಮ ವಿಚಾರಕ್ಕೆ ಸಂಬಂಧಿಸಿದ್ದು. ಇಲ್ಲಿ ಬುದ್ಧ ಧರ್ಮ, ಬಸವ ಧರ್ಮ ಮತ್ತು ಅಂಬೇಡ್ಕರ್ ಧರ್ಮ ಒಂದಲ್ಲೊಂದು ತಳಕು ಹಾಕಿಕೊಂಡಿದೆ. ಸರಳವೂ ಅರ್ಥ ಗುಂಫನವು ಆದ ಗಪದ್ಯವೆಂಬ ಕಥನದಲ್ಲಿ ತಮ್ಮ ಕಾವ್ಯ ರಚನೆಯನ್ನು ಹೆಣೆದಿದ್ದಾರೆ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು