4:07 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ‘ಸದ್ಧರ್ಮಗೀತ’ ನಾಲ್ಕು ಕಾವ್ಯ ಕಥನಗಳ ಗುಚ್ಛ ಕೃತಿ ಲೋಕಾರ್ಪಣೆ

03/01/2025, 23:50

ಬೆಂಗಳೂರು( reporterkarnataka.com):ಹಿರಿಯ ಐಎಎಸ್ ಅಧಿಕಾರಿ ರಾಜ್ಯ ಸರ್ಕಾರದ ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ನೂತನ ಕೃತಿ ‘ಸದ್ಧರ್ಮಗೀತ ‘ ನಾಲ್ಕು ಕಾವ್ಯಕಥನಗಳ ಗುಚ್ಛ ಲೋಕಾರ್ಪಣೆ ಸಮಾರಂಭವನ್ನು ನಗರದ ಇನ್ಫೆಂಟ್ರಿ ರಸ್ತೆಯ ಐಎಎಸ್ ಅಧಿಕಾರಿಗಳ ಸಂಘದಲ್ಲಿ ಆಯೋಜಿಸಲಾಗಿತ್ತು.
ಸೆಂಟರ್ ಫಾರ್ ಸಸ್ಟೈನೆಬಲ್ ಡೆವಲಪ್ಮೆಂಟ್ ಮತ್ತು ಐಎಎಸ್ ಅಧಿಕಾರಿಗಳ ಸಂಘ ಸಹಯೋಗದಲ್ಲಿ ಏರ್ಪಡಿಸಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಜಸ್ಟಿಸ್ ಶಿವರಾಜ ವಿ. ಪಾಟೀಲ್ ವಹಿಸಿ ಕೃ ತಿ ಲೋಕಾರ್ಪಣೆ ಮಾಡಿ ಮಾತನಾಡುತ್ತ ಕಾವ್ಯಕ್ಕೆ ಚುಂಬಕ ಶಕ್ತಿ ಉಂಟು. ಅದು ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತದೆ. ಭಾವಯತ್ರಿ ಪ್ರತಿಭೆವುಳ್ಳವರು ಕೂಡ ಕಾವ್ಯ ರಚನೆಗೆ ಕೈ ಹಾಕಿದವರುಂಟು, ಅಂತಹವರು ಕಾರಯಿತ್ರಿಯ ಕೈಯನ್ನು ಹಿಡಿಯುತ್ತಾರೆ. ಡಾ.ಎ ರವೀಂದ್ರರವರು ಈ ಸಾಲಿಗೆ ಸೇರಿದವರು . ಲೌಕಿಕ ಜ್ಞಾನ ಭಾಷೆ ಇಂಗ್ಲಿಷ್, ಮಾತೃಭಾಷೆ ತೆಲುಗು, ಹೃದಯದ ಭಾಷೆಯಾಗಿ ಕನ್ನಡದಲ್ಲಿ ಕಾವ್ಯ ಸಂವೇದನೆ ಇರುವ ವೈಚಾರಿಕ ಕಾವ್ಯ ‘ಸದ್ಧರ್ಮ ಗೀತ’ ನಮ್ಮ ಮುಂದೆ ಇಟ್ಟಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ ವೆಂಕಟೇಶರವರು ಕೃತಿ ಕುರಿತು ಇದು ಭಗವದ್ಗೀತೆಯಲ್ಲ ಬದಲಾಗಿ ಜೀವನದ ಆಕೃತಿಯ ಧರ್ಮ ವಿಚಾರಕ್ಕೆ ಸಂಬಂಧಿಸಿದ್ದು. ಇಲ್ಲಿ ಬುದ್ಧ ಧರ್ಮ, ಬಸವ ಧರ್ಮ ಮತ್ತು ಅಂಬೇಡ್ಕರ್ ಧರ್ಮ ಒಂದಲ್ಲೊಂದು ತಳಕು ಹಾಕಿಕೊಂಡಿದೆ. ಸರಳವೂ ಅರ್ಥ ಗುಂಫನವು ಆದ ಗಪದ್ಯವೆಂಬ ಕಥನದಲ್ಲಿ ತಮ್ಮ ಕಾವ್ಯ ರಚನೆಯನ್ನು ಹೆಣೆದಿದ್ದಾರೆ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು