4:03 AM Wednesday16 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ನಂಜನಗೂಡು ತಾಲೂಕು ಮಡಿವಾಳರ ಸಂಘದಿಂದ ಕ್ಯಾಲೆಂಡರ್ ಬಿಡುಗಡೆ

04/01/2025, 15:36

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಮಡಿವಾಳರ ಸಂಘದ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿರುವ ಮಡಿವಾಳದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಯಾಲೆಂಡರ್ ಬಿಡುಗಡೆ
ಕಾರ್ಯಕ್ರಮಕ್ಕೆ ಮುನ್ನ ಮಡಿವಾಳ ಶ್ರೀ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಇದೇ ಸಂದರ್ಭ ಸಮಾಜದ ಮುಖಂಡರು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹಾಗೂ ನಗರಸಭಾ ಅಧ್ಯಕ್ಷರಲ್ಲಿ ಅರ್ಧಂಬರ್ಧ ಗೊಂಡಿರುವ ಸಮುದಾಯ ಭವನದ ಕಾಮಗಾರಿಗೆ ಅನುದಾನ ಕೊಡಿಸುವಂತೆ ಮನವಿ ಮಾಡಿಕೊಂಡರು.
ಬಳಿಕ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ ಸೇರಿದಂತೆ ಮತ್ತಿತರ ಗಣ್ಯರು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹಾಗೂ ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ ಮಾತನಾಡಿ,
ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಮಡಿವಾಳ ಸಮಾಜದವರು ಹಲವಾರು ವರ್ಷಗಳಿಂದ ಈ ಕ್ಯಾಲೆಂಡರ್ ಬಿಡುಗಡೆ ಮಾಡಿಕೊಂಡು ಬರುತ್ತಿದ್ದಾರೆ ಎಂದು ಸಂಘದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಇನ್ನು ಸಮಾಜದ ಮುಖಂಡರ ಕೋರಿಕೆಯಂತೆ ಮಡಿವಾಳ ಸಮುದಾಯ ಭವನದ ಕಾಮಗಾರಿ ಪೂರ್ಣಗೊಳಿಸಲು ಶಾಸಕ ದರ್ಶನ್ ದ್ರುವನಾರಾಯಣ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಿ ಅನುದಾನ ಕೊಡಿಸುವುದರ ಜೊತೆಗೆ ನಗರಸಭೆಯಿಂದಲೂ ಅನುದಾನ ಕೊಡಿಸುವ ಭರವಸೆ ನೀಡಿದರು.


ಇದೇ ಸಂದರ್ಭ ಸಂಘದ ವತಿಯಿಂದ ವೇದಿಕೆ ಮೇಲಿನ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಎಚ್. ಡಿ. ಪ್ರಸನ್ನ ಕುಮಾರ್, ಗೌರವಾಧ್ಯಕ್ಷ ಶಿವಣ್ಣ,ಪ್ರಧಾನ ಕಾರ್ಯದರ್ಶಿ, ಕೂಡ್ಲಾಪುರ ಬಸವರಾಜು, ಉಪಾಧ್ಯಕ್ಷರುಗಳಾದ ರವಿ, ಮಹೇಶ್, ಖಜಾಂಚಿ ಸೋಮಣ್ಣ, ಮಹದೇವ್ ಸೇರಿದಂತೆ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು