2:40 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಎಂಎಸ್ ಪಿ ಕಾನೂನು ಜಾರಿಗೊಳಿಸಿ ರೈತರ ಉಳಿಸಿ ಹೋರಾಟ ಕೈಗೆತ್ತಿಕೊಂಡ ಬಿ. ಆರ್. ಪಾಟೀಲ್: ವಿಧಾನ ಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ

04/01/2025, 22:08

ಬೆಂಗಳೂರು(reporterkarnataka.com):ಎಂಎಸ್ ಪಿ ಶಾಸನಬದ್ಧಗೊಳಿಸಿ ರೈತರನ್ನು ಉಳಿಸಿ ಹೋರಾಟವನ್ನು ಕರ್ನಾಟಕ ರಾಜ್ಯದ ರೈತರ ಪ್ರತಿನಿಧಿ ಬಿ. ಆರ್. ಪಾಟೀಲ್ ಅವರು ಕೈಗೆತ್ತಿಕೊಂಡಿದ್ದಾರೆ.
ಪ್ರೊ. ಎಂ.ಎಸ್. ಸ್ವಾಮಿನಾಥನ್ ವರದಿಯ ಅನ್ವಯ ರೈತರ ಬೆಳೆಗಳಿಗೆ ಸಿ ೨ + ೫೦% ಕನಿಷ್ಟ ಬೆಂಬಲ ಬೆಲೆ ನೀಡಬೇಕೆಂಬುದು ರೈತರ ಹಕ್ಕೋತ್ತಾಯವನ್ನು ಬೆಂಬಲಿಸಿ ಶ್ರೀ ಜಗತ್ ಸಿಂಗ್ ದಲ್ಲೈವಾಲ ಅವರು ನವೆಂಬರ್ ೨೬, ೨೦೨೪ ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ತೀವ್ರಹದಗೆಟ್ಟಿದ್ದರಿಂದ ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು ಪಂಜಾಬ್ ಪಕ್ಕದ ಖನೌರಿ ಬಾರ್ಡರ್ ಆಸ್ಪ್ರತ್ರೆಗೆ ದಾಖಲಿಸಲಾಗಿದೆ.


ಈ ಹಿನ್ನೆಲೆಯಲ್ಲಿ ಕನ್ನಡ ನಾಡಿನ ಹೆಸರಾಂತ ಹೋರಾಟಗಾರರು, ಅಳಂದ ಶಾಸಕ ಬಿ ಆರ್ ಪಾಟೀಲ್ ಅವರು ಇಂದು ವಿಧಾನ ಸೌಧ ಹಾಗೂ ವಿಕಾಸ ಸೌಧದ ಮಧ್ಯದಲ್ಲಿರುವ ಗಾಂಧಿ ಪ್ರತಿಮೆ ಎದುರು ದಲ್ಲೈವಾಲ ಅವರನ್ನು ಉಳಿಸಿ ಮತ್ತು ರೈತರಿಗೆ ಎಂ ಎಸ್ ಪಿ ಶಾಸನಬದ್ಧಗೊಳಿಸಿ ರೈತರನ್ನು ಉಳಿಸಿ ಎಂದು ಒಂದು ದಿನದ ಶಾಂತಿಯುತ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಈ ಪ್ರತಿಭಟನೆಯಲ್ಲಿ ಕರ್ನಾಟಕದ ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಕಾಂ ಮೋಹನ್ ಕುಮಾರ್ ಕೊಂಡಜ್ಜಿ, ರೈತ ಹೋರಾಟಗಾರ ರೈತ ಮುಖಂಡ ವೀರಸಂಗಯ್ಯ ಇನ್ನಿತರರು ಪಾಲ್ಗೊಂಡರು.
ಪಾಟೀಲರ ಈ ಸಾಂಕೇತಿಕ ಹೋರಾಟಕ್ಕೆ ಇಡೀ ರಾಜ್ಯದ ರೈತರು ರೈತ ಮುಖಂಡರು ಮತ್ತು ರೈತಪರ ಕಾಳಜಿಯ ಪ್ರತಿಯೊಬ್ಬರ ಬೆಂಬಲವೂ ಇದೆ ಎಂಬುದನ್ನು ಹೇಳಬೇಕಿಲ್ಲ. ಎಲ್ಲರ ಬೆಂಬಲ ಅವರಿಗಿದೆ. ಇಡೀ ರಾಜ್ಯದ ರೈತ ಕುಲದ ಪ್ರತಿನಿಧಿಯಾಗಿ ಬಿ.ಆರ್. ಪಾಟೀಲರು ಪ್ರತಭಟನೆಯಲ್ಲಿ ತೊಡಗಿದ್ದಾರೆ.
ಮೂರು ಲೋಕ ಸಭಾ ಚುನಾವಣೆಗಳಿಗೂ ಮುನ್ನ ರೈತರ ಬೆಳೆಗಳಿಗೆ ಎಂ.ಎಸ್.ಪಿ ನೀಡುವುದಾಗಿ ಆಶ್ವಾಸನೆ ನೀಡಿದ್ದ ಆಗಿನ ಮತ್ತು ಈಗಿನ ಪ್ರಧಾನಿ ಎಂ.ಎಸ್.ಪಿ ಶಾಸನಬದ್ಧಗೊಳಿಸಿಲ್ಲ. ಹಿಂದೊಮ್ಮೆ ಎಂಎಸ್.ಪಿ ಕೊಂಚ ಹೆಚ್ಚಿಸಿ ಅದನ್ನೇ ಸಿ೨ + ೫೦% ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡುವ ದುಸ್ಸಾಹಸಕ್ಕೂ ಕೇಂದ್ರ ಸರ್ಕಾರದ ಕೃಷಿ ಸಚಿವಾಲಯ ಮುಂದಾಗಿತ್ತು. ಅದಾಗ ಖುದ್ದು ಸ್ವಾಮಿನಾಥನ್ ಇದು ತಾವು ಸೂಚಿಸಿದ್ದ ಸಿ೨+೫೦% ಅಲ್ಲ ಎಂದು ಪತ್ರಿಕಾ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು