6:16 PM Friday19 - December 2025
ಬ್ರೇಕಿಂಗ್ ನ್ಯೂಸ್
Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

ಇತ್ತೀಚಿನ ಸುದ್ದಿ

ಎಂಎಸ್ ಪಿ ಕಾನೂನು ಜಾರಿಗೊಳಿಸಿ ರೈತರ ಉಳಿಸಿ ಹೋರಾಟ ಕೈಗೆತ್ತಿಕೊಂಡ ಬಿ. ಆರ್. ಪಾಟೀಲ್: ವಿಧಾನ ಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ

04/01/2025, 22:08

ಬೆಂಗಳೂರು(reporterkarnataka.com):ಎಂಎಸ್ ಪಿ ಶಾಸನಬದ್ಧಗೊಳಿಸಿ ರೈತರನ್ನು ಉಳಿಸಿ ಹೋರಾಟವನ್ನು ಕರ್ನಾಟಕ ರಾಜ್ಯದ ರೈತರ ಪ್ರತಿನಿಧಿ ಬಿ. ಆರ್. ಪಾಟೀಲ್ ಅವರು ಕೈಗೆತ್ತಿಕೊಂಡಿದ್ದಾರೆ.
ಪ್ರೊ. ಎಂ.ಎಸ್. ಸ್ವಾಮಿನಾಥನ್ ವರದಿಯ ಅನ್ವಯ ರೈತರ ಬೆಳೆಗಳಿಗೆ ಸಿ ೨ + ೫೦% ಕನಿಷ್ಟ ಬೆಂಬಲ ಬೆಲೆ ನೀಡಬೇಕೆಂಬುದು ರೈತರ ಹಕ್ಕೋತ್ತಾಯವನ್ನು ಬೆಂಬಲಿಸಿ ಶ್ರೀ ಜಗತ್ ಸಿಂಗ್ ದಲ್ಲೈವಾಲ ಅವರು ನವೆಂಬರ್ ೨೬, ೨೦೨೪ ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ತೀವ್ರಹದಗೆಟ್ಟಿದ್ದರಿಂದ ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು ಪಂಜಾಬ್ ಪಕ್ಕದ ಖನೌರಿ ಬಾರ್ಡರ್ ಆಸ್ಪ್ರತ್ರೆಗೆ ದಾಖಲಿಸಲಾಗಿದೆ.


ಈ ಹಿನ್ನೆಲೆಯಲ್ಲಿ ಕನ್ನಡ ನಾಡಿನ ಹೆಸರಾಂತ ಹೋರಾಟಗಾರರು, ಅಳಂದ ಶಾಸಕ ಬಿ ಆರ್ ಪಾಟೀಲ್ ಅವರು ಇಂದು ವಿಧಾನ ಸೌಧ ಹಾಗೂ ವಿಕಾಸ ಸೌಧದ ಮಧ್ಯದಲ್ಲಿರುವ ಗಾಂಧಿ ಪ್ರತಿಮೆ ಎದುರು ದಲ್ಲೈವಾಲ ಅವರನ್ನು ಉಳಿಸಿ ಮತ್ತು ರೈತರಿಗೆ ಎಂ ಎಸ್ ಪಿ ಶಾಸನಬದ್ಧಗೊಳಿಸಿ ರೈತರನ್ನು ಉಳಿಸಿ ಎಂದು ಒಂದು ದಿನದ ಶಾಂತಿಯುತ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಈ ಪ್ರತಿಭಟನೆಯಲ್ಲಿ ಕರ್ನಾಟಕದ ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಕಾಂ ಮೋಹನ್ ಕುಮಾರ್ ಕೊಂಡಜ್ಜಿ, ರೈತ ಹೋರಾಟಗಾರ ರೈತ ಮುಖಂಡ ವೀರಸಂಗಯ್ಯ ಇನ್ನಿತರರು ಪಾಲ್ಗೊಂಡರು.
ಪಾಟೀಲರ ಈ ಸಾಂಕೇತಿಕ ಹೋರಾಟಕ್ಕೆ ಇಡೀ ರಾಜ್ಯದ ರೈತರು ರೈತ ಮುಖಂಡರು ಮತ್ತು ರೈತಪರ ಕಾಳಜಿಯ ಪ್ರತಿಯೊಬ್ಬರ ಬೆಂಬಲವೂ ಇದೆ ಎಂಬುದನ್ನು ಹೇಳಬೇಕಿಲ್ಲ. ಎಲ್ಲರ ಬೆಂಬಲ ಅವರಿಗಿದೆ. ಇಡೀ ರಾಜ್ಯದ ರೈತ ಕುಲದ ಪ್ರತಿನಿಧಿಯಾಗಿ ಬಿ.ಆರ್. ಪಾಟೀಲರು ಪ್ರತಭಟನೆಯಲ್ಲಿ ತೊಡಗಿದ್ದಾರೆ.
ಮೂರು ಲೋಕ ಸಭಾ ಚುನಾವಣೆಗಳಿಗೂ ಮುನ್ನ ರೈತರ ಬೆಳೆಗಳಿಗೆ ಎಂ.ಎಸ್.ಪಿ ನೀಡುವುದಾಗಿ ಆಶ್ವಾಸನೆ ನೀಡಿದ್ದ ಆಗಿನ ಮತ್ತು ಈಗಿನ ಪ್ರಧಾನಿ ಎಂ.ಎಸ್.ಪಿ ಶಾಸನಬದ್ಧಗೊಳಿಸಿಲ್ಲ. ಹಿಂದೊಮ್ಮೆ ಎಂಎಸ್.ಪಿ ಕೊಂಚ ಹೆಚ್ಚಿಸಿ ಅದನ್ನೇ ಸಿ೨ + ೫೦% ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡುವ ದುಸ್ಸಾಹಸಕ್ಕೂ ಕೇಂದ್ರ ಸರ್ಕಾರದ ಕೃಷಿ ಸಚಿವಾಲಯ ಮುಂದಾಗಿತ್ತು. ಅದಾಗ ಖುದ್ದು ಸ್ವಾಮಿನಾಥನ್ ಇದು ತಾವು ಸೂಚಿಸಿದ್ದ ಸಿ೨+೫೦% ಅಲ್ಲ ಎಂದು ಪತ್ರಿಕಾ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು