2:46 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಬೃಹತ್ ಚರಂಡಿಗೆ ಬಿದ್ದ ನಾಯಿ ಮರಿ: ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ರಕ್ಷಣೆ

05/01/2025, 09:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತಾಯಿ ಜೊತೆ ಹೋಗುವಾಗ ರಾಷ್ಟ್ರೀಯ ಹೆದ್ದಾರಿ ಪಕ್ಕದ ಬೃಹತ್ ಚರಂಡಿಗೆ ಬಿದ್ದ ನಾಯಿ ಮರಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ.
ಚರಂಡಿಗೆ ಬಿದ್ದ ಮರಿಯನ್ನ ಮೇಲೆ ಎಳೆಯಲಾಗದೇ ತಾಯಿ ನಾಯಿ ಕೂಗುತ್ತಿತ್ತು. ಚರಂಡಿ ನೀರಿನ ಜೊತೆ ನಾಯಿ ಮರಿ
ತೇಲಿ ಹೋಗುತ್ತಿತ್ತು.


ನಾಯಿ ಚರಂಡಿ ನೋಡಿ ಬೊಗಳುತ್ತಿದ್ದದನ್ನು ಸ್ಥಳಿಯರು ಗಮನಿಸಿದರು. ಚರಂಡಿಯಲ್ಲಿ ಡ್ರೈನೇಜ್ ಪೈಪ್ ಹಿಡಿದು ನಾಯಿ ಮರಿ ನಿಂತಿತ್ತು. ತಕ್ಷಣ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಸ್ಥಳಿಯರು ವಿಷಯ ಮುಟ್ಟಿಸಿದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ನಾಯಿ ಮರಿಯನ್ನು ರಕ್ಷಿಸಿದ್ದಾರೆ. ಡ್ರೈನೇಜ್ ಒಳಗಡೆ ಹೋಗಿ ಸ್ಲಾಬ್ ತೆಗೆದು ನಾಯಿಯನ್ನ ಅಗ್ನಿಶಾಮಕ ಸಿಬ್ಬಂದಿ ಹೊರಗೆ ತಂದಿದ್ದಾರೆ.
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಬಳಿ ಈ ಘಟನೆ ನಡೆದಿದೆ. ಚರಂಡಿಯಿಂದ ಮೇಲೆ ಎತ್ತುತ್ತಿದ್ದಂತೆ ಅಮ್ಮನ ಜೊತೆ ನಾಯಿ ಮರಿ ಓಡಿ ಹೋಯಿತು.

ಇತ್ತೀಚಿನ ಸುದ್ದಿ

ಜಾಹೀರಾತು