3:01 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮಾರನಾಳ ತಾಂಡದಲ್ಲಿ ನೂತನ ತರಕಾರಿ ಮಾರುಕಟ್ಟೆ ಉದ್ಘಾಟನೆ: ಪಿಎಸ್ ಐ ರಾಜಶೇಖರ ರಾಠೋಡ ಚಾಲನೆ

05/01/2025, 10:06

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಮಾರನಾಳ ತಾಂಡ (ಮಾರನಾಳ ತಾಂಡಾ) ರಾಮರಾವ್ ನಗರ ಕ್ರಾಸ್ ಬಳಿ ತರಕಾರಿ ಮಾರುಕಟ್ಟೆ ಉದ್ಘಾಟನೆಯನ್ನು ನಾರಾಯಣಪುರ ಪಿಎಸ್ಐ ರಾಜಶೇಖರ್ ರಾಠೋಡ ನೆರವೇರಿಸಿದರು.

ಸುಸಜ್ಜಿತ ಮತ್ತು ಸುವ್ಯವಸ್ಥಿತ ಮಾರುಕಟ್ಟೆ ಇದಾಗಿದೆ. ಈ ಮಾರುಕಟ್ಟೆಯಿಂದ ದಶಕಗಳಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವರಿಗೆ ಹಾಗೂ ಮಾರಾಟಗಾರರಿಗೆ ಬಹಳ ಅನುಕೂಲವಾಗಲಿದೆ.
ವ್ಯವಸ್ಥಿತವಾಗಿ ಮಾರುಕಟ್ಟೆ ಇಲ್ಲದೆ ರೈತರು ಮತ್ತು ಮಾರಾಟಗಾರರು, ತರಕಾರಿ, ಹಣ್ಣು, ಹೂವುಗಳನ್ನು ಮಾರಾಟ ಮಾಡುತ್ತಿದ್ದಾರೆ. ಹಾಗಾಗಿ ಇದಾನ ನಾವು ಸದುವಯೋಗ ಪಡೆದುಕೊಳ್ಳೋಣಾ ಎಂದು ತಿಳಿಸಿದರು.
*ರಾಮರಾವ್ ನಗರ ಕ್ರಾಸ್ ಬಳಿ ಸಿದ್ದವಾಗುತ್ತಿದೆ ತರಕಾರಿ ಮಾರುಕಟ್ಟೆ;* ನಾರಾಯಣಪುರ ಮತ್ತು ಕೊಡೇಕಲ್ ನಡುವೆ, ನಾರಾಯಣಪುರ ಗ್ರಾಮದಿಂದ ಸುಮಾರು 7 ಕಿ.ಮೀ. ದೂರದಲ್ಲಿದೆ. ಹೊಸ ಮಾರುಕಟ್ಟೆಯು (ಮಾರನಾಳ ತಾಂಡಾ) ರಾಮರಾವ್ ನಗರ ಕ್ರಾಸ್ ಬಳಿ ನಿರ್ಮಿಸಲಾಗಿದೆ. ಇದರಿಂದ ಮಾರನಾಳ, ಯರಕಿಹಾಳ, ಮಾವಿನಗಿಡ್ ತಾಂಡಾ, ಜೋಕಾಂಡಭಾವಿ , ಗಡ್ಡದ ತಾಂಡಾ, ಬರದೇವನಾಳ , ರಾಯನಗೋಳ, ಜುಮಾಲಪುರ್ ದೊಡ್ಡ ತಾಂಡಾ, ಬೆಲ್ಲದಗಿಡ ತಾಂಡಾ, ಹಾಗೂ ಸುತ್ತಮುತ್ತಲಿನ ಗ್ರಾಮ ನಿವಾಸಿಗಳಿಗೆ ಅನುಕೂಲವಾಗಲಿದೆ.
ಮಾರುಕಟ್ಟೆಯಲ್ಲಿನ ಹೈಟೆಕ್ ಸೌಲಭ್ಯಗಳು ಇಲ್ಲದಿದ್ದರೂ ಸಹ ಹವಾಮಾನ ಪರಿಸ್ಥಿತಿಗಳಲ್ಲೂ ಯಾವುದೇ ತೊಂದರೆಯಿಲ್ಲದೆ. ತರಕಾರಿಗಳು, ಹಣ್ಣುಗಳು ಮತ್ತು ಹೂವುಗಳನ್ನು ಮಾರಾಟ ಮಾಡಬಹುದಾಗಿದೆ. ಗ್ರಾಮದ ಮಾರುಕಟ್ಟೆಯ ಸುತ್ತಲಿನ ಸಂಚಾರ ದಟ್ಟಣೆಯಿಂದ ಪ್ರಯಾಣಿಕರು ಮತ್ತು ಪಾದಚಾರಿಗಳು ಕಿರಿಕಿರಿ ಅನುಭವಿಸುತ್ತಾರೆ. ಸದ್ಯ ಮಾರನಾಳ ತಾಂಡದ ರಾಮರಾವ್ ನಗರ ಕ್ರಾಸ್ ಬಳಿ ನಿರ್ಮಿಸಲಾದ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಮಾಡುತ್ತಿರುವ 100ಕ್ಕೂ ಹೆಚ್ಚು ಮಾರಾಟಗಾರರು ಹೊಸ ಮಾರುಕಟ್ಟೆಗೆ ಬಂದಿದರು ಸಂತೋಷ ತರತಕ್ಕದು ಎಂದು ಮಾರಾಟಗಾರರು ಹರ್ಷ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ನಾರಾಯಣಪುರ ಪಿ.ಎಸ್.ಐ. ರಾಜಶೇಖರ್ ರಾಠೋಡ್, ಬರದನಾಳ ಪಿ.ಡಿ.ಓ ಪ್ರೀಮಾ ರಾಠೋಡ್ , ಚಂದು ಹರಾವತ, ಸೀತಾಬಾಯಿ ಪವಾರ, ಶೇಖರ್ ನಾಯಕ್ , ಕೃಷ್ಣ್ ಜಾದವ . ಬಾಬು ಚವಾಣ್,
ಹರಿಕೃಷ್ಣ ಮೂಡ್ , ವಿನೋದ ಪವಾರ , ಜೈರಾಮ್ ರಾಠೋಡ, ತಿರುಪತಿ ಚವಾಣ್ ಹಾಗೂ ಗೋರ್ ಸೇನಾ ಗೋರ್ ಸಿಕವಾಡಿಯ ಹಲವಾರು ಪದಾಧಿಕಾರಿಗಳು. ಮತ್ತು ಗುರು ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು