11:19 PM Friday27 - February 2026
ಬ್ರೇಕಿಂಗ್ ನ್ಯೂಸ್
ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ

ಇತ್ತೀಚಿನ ಸುದ್ದಿ

ಕೌಶಲ್ಯತೆ ಅಳವಡಿಸಿಕೊಂಡು ಯಶಸ್ವಿಯಾಗಿ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

05/01/2025, 10:11

ಗಣೇಶನ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಉತ್ತಮ ಅಂಕಗಳ ಜೊತೆಗೆ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಗುಣಗಳನ್ನು ಅಳವಡಿಕೊಂಡು ಯಶಸ್ವಿಯಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಸರಳಾದೇವಿ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಉದ್ಯೋಗ ಮೇಳ 2025’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯೋಗ ಪಡೆದುಕೊಳ್ಳುವುದಷ್ಟೇ ಆಗದೆ ಈ ಭಾಗದಲ್ಲಿ ಉದ್ಯಮ ಸ್ಥಾಪನೆ ಮಾಡುವುದರ ಮೂಲಕ ಇತರರಿಗೂ ಉದ್ಯೋಗ ನೀಡುವಂತರಾಗಬೇಕು ಎಂದರು.
ಕ್ರಿಯಾಶೀಲ ಮನೋಭಾವ, ಸ್ಪರ್ಧಾತ್ಮಕ ಮನಸ್ಸು, ಸತತ ಪ್ರಯತ್ನದಿಂದ ಬದುಕು ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಬದುಕಿನಲ್ಲಿ ಉತ್ತಮ ಸಾಧಕರಾಗಲು ಕಠಿಣ ಪರಿಶ್ರಮ, ಸಂವಹನ ಕಲೆ, ಭಾಷೆಯ ಮೇಲೆ ಉತ್ತಮ ಹಿಡಿತ, ಸಾಧಿಸುವ ಛಲದಂತಹ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಅವಶ್ಯ ಎಂದರು.
ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಯಶವಂತ್ ರಾಜ್ ನಾಗಿರೆಡ್ಡಿ ಅವರು ಮಾತನಾಡಿ, ಇಂತಹ ಉದ್ಯೋಗ ಮೇಳಗಳು ಈ ಭಾಗದ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವಲ್ಲಿ ಸಹಕಾರಿಯಾಗುತ್ತವೆ. ನಮ್ಮ ವಾಣಿಜ್ಯೋದ್ಯಮ ಮಂಡಳಿಯು ಇಂತಹ ಚಟುವಟಿಕೆಗಳಿಗೆ ಸದಾ ಸಹಕರಿಸುತ್ತದೆ ಎಂದರು.
ಉದ್ಯೋಗ ಮೇಳದ ಬಗೆಗೆ ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ್, ಈ ಮೇಳದಲ್ಲಿ 41 ಕಂಪನಿಗಳು ಭಾಗವಹಿಸಿವೆ. 1673 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮೋನಿಕಾ ರಂಜನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಹಟ್ಟಪ್ಪ, ಉದ್ಯೋಗ ಭರವಸೆ ಕೋಶದ ಸಂಚಾಲಕ ಕಲ್ಯಾಣ ಬಸವ, ಕೌಶಲ್ಯಾಭಿವೃದ್ದಿ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ್, ಜಿಲ್ಲಾ ಅಭಿಯಾನ ವ್ಯವಸ್ಥಾಪಕರಾದ ದೇವರಾಜ್, ಪ್ರಾಣೇಶ್, ಎಎಸ್‌ಒ ಚಂದ್ರಮ್ಮ ಹಾಗೂ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಪ್ರಹ್ಲಾದ್ ಚೌದ್ರಿ, ಡಾ.ಹೊನ್ನೂರಾಲಿ, ಡಾ.ಸೋಮನಾಥ, ಡಾ.ದಸ್ತಗೀರಸಾಬ್ ದಿನ್ನಿ, ಡಾ.ಚನ್ನ ಬಸವಯ್ಯ, ಡಾ.ಶ್ರೀನಿವಾಸ ರೆಡ್ಡಿ, ಪಂಪನಗೌಡ, ಡಾ.ಪಂಚಾಕ್ಷರಿ, ಡಾ.ಗುರುಬಸಪ್ಪ, ಡಾ.ದುರ್ಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು