1:33 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಹಣಕ್ಕೆ ಪೀಡಿಸುವ ನಾಲ್ವರ ಖತರ್ನಾಕ್ ಗ್ಯಾಂಗ್: ಒಂಟಿ ಮನೆ, ಮಹಿಳೆಯರೇ ಇವರ ಟಾರ್ಗೆಟ್!

05/01/2025, 20:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.Com

ಜಿಲ್ಲೆಯಲ್ಲಿ ಒಂದ ಹೊಸ ವರಸೆ ಶುರುವಾಗಿದೆ. ಒಂಟಿ ಮನೆ ಹಾಗೂ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಬರಲಾಗುತ್ತಿದೆ. ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಇಂತಹ ಘಟನೆ ನಡೆದಿದೆ.


ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಹಣಕ್ಕೆ ಪೀಡಿಸುವ ನಾಲ್ವರ ತಂಡ ಇದಾಗಿದೆ.
ಮೈಲಾರಲಿಂಗ ಒಕ್ಕಲಿನ ಬಟ್ಟೆ ಧರಿಸಿ ಮನೆಗಳಿಗೆ ಈ ನಾಲ್ವರು ನುಗ್ಗುತ್ತಾರೆ. ಮನೆಯವರು ಬಾಗಿಲು ತೆಗೆಯೋವರೆಗೂ ಹೋಗಲ್ಲ… ಮನೆ ಹಿಂದೆ-ಮುಂದೆ ಎಲ್ಲಾ ಸುತ್ತಾಡುತ್ತಾರೆ. ಗೌಡ್ರೆ, ಅಮ್ಮ, ಅಮ್ಮಾವ್ರೆ, ಅವ್ವ, ಸರ್, ಮಾಲೀಕರೇ, ಅಪ್ಪಾಜಿ ಅಂತೆಲ್ಲಾ ಮನೆಯವರು ಹೊರಗೆ ಬರುವವರೆಗೂ ಕೂಗ್ತಾರೆ.
ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಬಾಳೆಹಳ್ಳಿ ರಮೇಶ್ ಗೌಡ ಅವರ ಮನೆಗೆ ಈ ನಾಲ್ವರ ಗ್ಯಾಂಗ್ ಬಂದಿದೆ. ಮನೆಯವರು ಬರೋವರೆಗೂ ಅವರ ಚಲನ-ವಲನ, ಹಾವಾಭಾವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನ ಕಂಡ ಕೂಡಲೇ ತಲೆಗೆ ಗೌನ್ ಹಾಕಿ ನಿಮ್ಮ ಮನೆಗೆ ಮೈಲಾರಲಿಂಗ ಬಂದಾನಾ ಅಂತ ಹೇಳುತ್ತಾರೆ.
ಮನೆಯವ್ರು ಬಾಗಿಲು ತೆಗೆದ ಕೂಡಲೇ ಸೀದಾ ಒಳಗೆ ಹೋಗ್ತಾರೆ. ಮಹಿಳೆಯರಿಗೆ ದೇವರು ಅಂತ ಹೆದರಿಸಿ ಹಣ ಪಡೆಯುತ್ತಾರೆ. ಮುಂದೆ ಈ ತಂಡದಿಂದ ಏನಾದರೂ ಅವಘಡ ಸಂಭವಿಸಬಹುದೆಂದು ಮಲೆನಾಡಿಗರು ಎಚ್ಚರಗೊಂಡಿದ್ದಾರೆ. ಇವರು ಎಲ್ಲೇ ಕಂಡರೂ ಕೂಡಲೇ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು