6:19 PM Friday19 - December 2025
ಬ್ರೇಕಿಂಗ್ ನ್ಯೂಸ್
Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

ಇತ್ತೀಚಿನ ಸುದ್ದಿ

ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಹಣಕ್ಕೆ ಪೀಡಿಸುವ ನಾಲ್ವರ ಖತರ್ನಾಕ್ ಗ್ಯಾಂಗ್: ಒಂಟಿ ಮನೆ, ಮಹಿಳೆಯರೇ ಇವರ ಟಾರ್ಗೆಟ್!

05/01/2025, 20:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.Com

ಜಿಲ್ಲೆಯಲ್ಲಿ ಒಂದ ಹೊಸ ವರಸೆ ಶುರುವಾಗಿದೆ. ಒಂಟಿ ಮನೆ ಹಾಗೂ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಬರಲಾಗುತ್ತಿದೆ. ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಇಂತಹ ಘಟನೆ ನಡೆದಿದೆ.


ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಹಣಕ್ಕೆ ಪೀಡಿಸುವ ನಾಲ್ವರ ತಂಡ ಇದಾಗಿದೆ.
ಮೈಲಾರಲಿಂಗ ಒಕ್ಕಲಿನ ಬಟ್ಟೆ ಧರಿಸಿ ಮನೆಗಳಿಗೆ ಈ ನಾಲ್ವರು ನುಗ್ಗುತ್ತಾರೆ. ಮನೆಯವರು ಬಾಗಿಲು ತೆಗೆಯೋವರೆಗೂ ಹೋಗಲ್ಲ… ಮನೆ ಹಿಂದೆ-ಮುಂದೆ ಎಲ್ಲಾ ಸುತ್ತಾಡುತ್ತಾರೆ. ಗೌಡ್ರೆ, ಅಮ್ಮ, ಅಮ್ಮಾವ್ರೆ, ಅವ್ವ, ಸರ್, ಮಾಲೀಕರೇ, ಅಪ್ಪಾಜಿ ಅಂತೆಲ್ಲಾ ಮನೆಯವರು ಹೊರಗೆ ಬರುವವರೆಗೂ ಕೂಗ್ತಾರೆ.
ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಬಾಳೆಹಳ್ಳಿ ರಮೇಶ್ ಗೌಡ ಅವರ ಮನೆಗೆ ಈ ನಾಲ್ವರ ಗ್ಯಾಂಗ್ ಬಂದಿದೆ. ಮನೆಯವರು ಬರೋವರೆಗೂ ಅವರ ಚಲನ-ವಲನ, ಹಾವಾಭಾವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನ ಕಂಡ ಕೂಡಲೇ ತಲೆಗೆ ಗೌನ್ ಹಾಕಿ ನಿಮ್ಮ ಮನೆಗೆ ಮೈಲಾರಲಿಂಗ ಬಂದಾನಾ ಅಂತ ಹೇಳುತ್ತಾರೆ.
ಮನೆಯವ್ರು ಬಾಗಿಲು ತೆಗೆದ ಕೂಡಲೇ ಸೀದಾ ಒಳಗೆ ಹೋಗ್ತಾರೆ. ಮಹಿಳೆಯರಿಗೆ ದೇವರು ಅಂತ ಹೆದರಿಸಿ ಹಣ ಪಡೆಯುತ್ತಾರೆ. ಮುಂದೆ ಈ ತಂಡದಿಂದ ಏನಾದರೂ ಅವಘಡ ಸಂಭವಿಸಬಹುದೆಂದು ಮಲೆನಾಡಿಗರು ಎಚ್ಚರಗೊಂಡಿದ್ದಾರೆ. ಇವರು ಎಲ್ಲೇ ಕಂಡರೂ ಕೂಡಲೇ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು