4:07 AM Sunday5 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಹಣಕ್ಕೆ ಪೀಡಿಸುವ ನಾಲ್ವರ ಖತರ್ನಾಕ್ ಗ್ಯಾಂಗ್: ಒಂಟಿ ಮನೆ, ಮಹಿಳೆಯರೇ ಇವರ ಟಾರ್ಗೆಟ್!

05/01/2025, 20:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.Com

ಜಿಲ್ಲೆಯಲ್ಲಿ ಒಂದ ಹೊಸ ವರಸೆ ಶುರುವಾಗಿದೆ. ಒಂಟಿ ಮನೆ ಹಾಗೂ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಬರಲಾಗುತ್ತಿದೆ. ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಇಂತಹ ಘಟನೆ ನಡೆದಿದೆ.


ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಹಣಕ್ಕೆ ಪೀಡಿಸುವ ನಾಲ್ವರ ತಂಡ ಇದಾಗಿದೆ.
ಮೈಲಾರಲಿಂಗ ಒಕ್ಕಲಿನ ಬಟ್ಟೆ ಧರಿಸಿ ಮನೆಗಳಿಗೆ ಈ ನಾಲ್ವರು ನುಗ್ಗುತ್ತಾರೆ. ಮನೆಯವರು ಬಾಗಿಲು ತೆಗೆಯೋವರೆಗೂ ಹೋಗಲ್ಲ… ಮನೆ ಹಿಂದೆ-ಮುಂದೆ ಎಲ್ಲಾ ಸುತ್ತಾಡುತ್ತಾರೆ. ಗೌಡ್ರೆ, ಅಮ್ಮ, ಅಮ್ಮಾವ್ರೆ, ಅವ್ವ, ಸರ್, ಮಾಲೀಕರೇ, ಅಪ್ಪಾಜಿ ಅಂತೆಲ್ಲಾ ಮನೆಯವರು ಹೊರಗೆ ಬರುವವರೆಗೂ ಕೂಗ್ತಾರೆ.
ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಸಮೀಪದ ಬಾಳೆಹಳ್ಳಿ ರಮೇಶ್ ಗೌಡ ಅವರ ಮನೆಗೆ ಈ ನಾಲ್ವರ ಗ್ಯಾಂಗ್ ಬಂದಿದೆ. ಮನೆಯವರು ಬರೋವರೆಗೂ ಅವರ ಚಲನ-ವಲನ, ಹಾವಾಭಾವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನ ಕಂಡ ಕೂಡಲೇ ತಲೆಗೆ ಗೌನ್ ಹಾಕಿ ನಿಮ್ಮ ಮನೆಗೆ ಮೈಲಾರಲಿಂಗ ಬಂದಾನಾ ಅಂತ ಹೇಳುತ್ತಾರೆ.
ಮನೆಯವ್ರು ಬಾಗಿಲು ತೆಗೆದ ಕೂಡಲೇ ಸೀದಾ ಒಳಗೆ ಹೋಗ್ತಾರೆ. ಮಹಿಳೆಯರಿಗೆ ದೇವರು ಅಂತ ಹೆದರಿಸಿ ಹಣ ಪಡೆಯುತ್ತಾರೆ. ಮುಂದೆ ಈ ತಂಡದಿಂದ ಏನಾದರೂ ಅವಘಡ ಸಂಭವಿಸಬಹುದೆಂದು ಮಲೆನಾಡಿಗರು ಎಚ್ಚರಗೊಂಡಿದ್ದಾರೆ. ಇವರು ಎಲ್ಲೇ ಕಂಡರೂ ಕೂಡಲೇ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು