2:02 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಶಕ್ತಿ ಬರುವುದಿಲ್ಲ: ಸಿಎಂ ಸಿದ್ದರಾಮಯ್ಯ

05/01/2025, 20:45

ದಾವಣಗೆರೆ(reporterkarnataka.com): ಕನಕದಾಸರು ಆಕಸ್ಮಿಕವಾಗಿ ಕುರುಬ ಜಾತಿಯಲ್ಲಿ ಹುಟ್ಟಿದ ಜಾತ್ಯತೀತ ದಾರ್ಶನಿಕ ಸಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು


537ನೇ ಕನಕ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕುರುಬ ಜಾತಿಯಲ್ಲಿ ಹುಟ್ಟಿ ಜಾತಿ ರಹಿತ ಸಮ‌ಸಮಾಜಕ್ಕಾಗಿ ಹೋರಾಡಿದ, ಜಾತ್ಯತೀತ ಸಂತ. ಮನುಕುಲದ ಏಳೆಗೆಗಾಗಿ ಶ್ರಮಿಸಿ ದಾಸ ಶ್ರೇಷ್ಠರಾದರು ಎಂದರು.
ಶರಣ ಸಾಹಿತ್ಯದಲ್ಲಿ ಅಣ್ಣ ಬಸವಣ್ಣ, ದಾಸ ಸಾಹಿತ್ಯದಲ್ಲಿ ಕನಕದಾಸರು ಅತ್ಯಂತ ಪ್ರಮುಖರು. ಬುದ್ದನಿಂದ ಕನಕದಾಸರವರೆಗೂ, ಆ ನಂತರವೂ ಬಹಳ ಪುಣ್ಯಾತ್ಮರು ಜಾತಿರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಅಂಬೇಡ್ಕರ್, ನಾರಾಯಣಗುರು ಮತ್ತು ಕನಕದಾಸರು ಕೂಡ ಜಾತಿ ವ್ಯವಸ್ಥೆ, ವರ್ಣ ವ್ಯವಸ್ಥೆಯ ಕಾರಣಕ್ಕೆ ಅವಮಾನಿತರಾಗಿದ್ದರು. ಯಾರೂ ಜನ್ಮತಃ ದಡ್ಡರಾಗಿರಲು ಸಾಧ್ಯವಿಲ್ಲ. ಕಾಳಿದಾಸರು ಶಾಕುಂತಲಾ ಬರೆದದ್ದು, ವ್ಯಾಸರು ಮಹಾಭಾರತ ಬರೆದದ್ದು, ವಾಲ್ಮೀಕಿ ರಾಮಾಯಣ ಬರೆದದ್ದೇ ಹುಟ್ಟಿನಿಂದ ಯಾರೂ ದಡ್ಡರಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದೆ ಎಂದರು.
ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಕಾರಣದಿಂದ ನನಗೆ ಮುಖ್ಯಮಂತ್ರಿ ಅಗುವ ಅವಕಾಶ ಸಿಕ್ಕಿತು ಎಂದರು.
ಒಬ್ಬರಿಗೆ ಒಂದೇ ಮತ. ಎಲ್ಲಾ ಜಾತಿ, ಧರ್ಮ, ಅಂತಸ್ತಿವರಿಗೂ ಒಂದೇ ಮತ. ಈ ಸಮಾನತೆ ಆರ್ಥಿಕವಾಗಿ, ಸಾಮಾಜಿಕವಾಗಿಯೂ ಜಾರಿ ಆಗಬೇಕು. ಆಗ ಮಾತ್ರ ಸಮಾನತೆ ದಿಕ್ಕಿನಲ್ಲಿ ನಾವು ಮುನ್ನಡೆಯಲು ಸಾಧ್ಯ ಎಂದರು.
ಯಾವ ಧರ್ಮದಲ್ಲೂ ಮನುಷ್ಯ ತಾರತಮ್ಯ ಇಲ್ಲ. ಧರ್ಮವನ್ನು ರಾಜಕೀಯವಾಗಿ ಬಳಸಿಕೊಳ್ಳುವವರು ತಮ್ಮ ಲಾಭಕ್ಕಾಗಿ ತಾರತಮ್ಯ, ದ್ವೇಷ ಸೃಷ್ಟಿಸುತ್ತಾರೆ ಎಂದರು.
ಶೋಷಿತ ಸಮುದಾಯಗಳು ಜಾತಿ ಸಮ್ಮೇಳನ ಮಾಡುವುದು ತಪ್ಪಲ್ಲ. ಆದರೆ ಮುಂದುವರೆದ ಜಾತಿಗಳು ಜಾತಿ ಹೆಸರಲ್ಲಿ ಸಮ್ಮೇಳನ ನಡೆಸುವುದು ಸಾಮಾಜಕವಾಗಿ ತಪ್ಪಾಗುತ್ತದೆ. ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಶಕ್ತಿ ಬರುವುದಿಲ್ಲ ಎಂದರು.
ಮನುಷ್ಯ ಧರ್ಮ ಸ್ಥಾಪನೆ ಆಗುವವರೆಗೂ ನಾವೆಲ್ಲರೂ ಶ್ರಮಿಸುತ್ತಲೇ ಇರಬೇಕು.
ನಾನು ಎಲ್ಲಾ ಜಾತಿಯವರನ್ನೂ ಪ್ರೀತಿಸುತ್ತೇನೆ. ಆದರೆ ಜಾತಿ ಮಾಡುವವರನ್ನು ನಾನು ವಿರೋಧಿಸುತ್ತೇನೆಯೇ ಹೊರತು ಅವರನ್ನೂ ದ್ವೇಷಿಸುವುದಿಲ್ಲ. ಜಾತಿ ಕಾರಣದಿಂದ ಕನಕದಾಸರನ್ನು ಉಡುಪಿ ಮಠದ ಒಳಗೆ ಬಿಡಲಿಲ್ಲ ಎನ್ನುತ್ತಾ ಕನಕನ‌ ಕಿಂಡಿ ಸೃಷ್ಟಿಯಾದ ಪ್ರಸಂಗವನ್ನು ವಿವರಿಸಿದರು.
ಕನಕದಾಸರ 500ನೇ ಜಯಂತಿಯನ್ನು ನಾನು ಸಾರಿಗೆ ಸಚಿವನಾಗಿದ್ದಾಗ ಆಗಿನ ಎಸ್.ಆರ್.ಬೊಮ್ಮಾಯಿ ಸರ್ಕಾರದಲ್ಲಿ ಆರಂಭಿಸಿದೆವು. ಬಳಿಕ ಇಡೀ ರಾಜ್ಯ ಪ್ರವಾಸ ಮಾಡಿ ಕಾಗಿನೆಲೆ ಗುರುಪೀಠವನ್ನು , ಮಠವನ್ನು ರೂಪಿಸಿದ್ದು ಕೂಡ ನಾನೇ. ಆದ್ದರಿಂದ ಇಡೀ ಸಮುದಾಯ ಒಟ್ಟಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು ಎಂದರು.

*ಕಾಂತರಾಜ ವರದಿ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ:*
ನಾನು ಜಾತಿ ಜನಗಣತಿ ಪರವಾಗಿ ಇದ್ದೇವೆ. ಕಾಂತರಾಜ ಅವರ ವರದಿಯನ್ನು ಮುಂದಿನ ಕ್ಯಾಬಿನೆಟ್ ನಲ್ಲಿ ಇಟ್ಟು ಚರ್ಚಿಸುವ ಉದ್ದೇಶ ಕೂಡ ಇದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು