12:44 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 12ರಲ್ಲಿ 12 ಸ್ಥಾನಗಳಲ್ಲಿಯೂ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು

06/01/2025, 20:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ 12 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ.
ಗೆದ್ದ ಅಭ್ಯರ್ಥಿಗಳನ್ನ ಕಾರ್ಯಕರ್ತರು ಬಣಕಲ್ ಪಟ್ಟಣ ಹಾಗೂ ಕೊಟ್ಟಿಗೆಹಾರ ದಲ್ಲಿ ಮೆರವಣಿಗೆ ಮಾಡಲಾಯಿತು.
ಮೆರವಣಿಗೆ ನಂತರ ಕಾರ್ಯಕರ್ತರನ್ನು ಹಾಗೂ ರೈತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡರಾದ ಬಿ.ಎಂ. ಭರತ್, ಸಹಕಾರ ಸಂಘದ ಅಭಿವೃದ್ಧಿ ನೋಡಿ ರೈತರು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ. ಈ ಗೆಲುವು ಕಾರ್ಯಕರ್ತರ ಹಾಗೂ ರೈತರ ಗೆಲುವಾಗಿದೆ ಎಂದರು.


ದೀಪಕ್ ದೊಡ್ಡಯ್ಯ ಮಾತನಾಡಿ, ಎಲ್ಲಾ ರಂಗಗಳಲ್ಲೂ ಬಿಜೆಪಿ ಪಕ್ಷವನ್ನು ಸೋಲಿಸಲು ಬಿಜೆಪಿ ಪಕ್ಷದಿಂದ ಮಾತ್ರವೇ ಸಾಧ್ಯವೇ ಹೊರತು ಬೇರೆ ಪಕ್ಷಗಳಿಂದ ಸೋಲಿಸಲು ಅಸಾಧ್ಯ ಎಂದರು.
ಮೆರವಣಿಗೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಹಾಗೂ ರೈತರು ಹಾಜರಿದ್ದರು.
*ಗೆದ್ದ ಅಭ್ಯರ್ಥಿಗಳ ಮತಗಳು:*
ಭರತ್ ಬಿ. ಎಂ.ಬಾಳೂರು1043, ಕಲ್ಲೇಶ್ ಬಾಳೂರು 957, ವಿಕ್ರಂ ಗೌಡ 949,ಅಭಿಲಾಶ್ 914, ಗಜೇಂದ್ರ ಗೌಡ 890, ನಾರಾಯಣ ಗೌಡ 806, ರವೀಂದ್ರ.805, ಲಕ್ಷ್ಮಿ801, ರಂಗನಾಥ್ 798, ಮಮತಾ 770,ಶರತ್ 736,(ಸಾಲಗಾರ ಅಲ್ಲದ ಕ್ಷೇತ್ರ ಯತೀಶ್ ಗೌಡ:100)ಮತಗಳನ್ನು ಪಡೆದು ಜಯಶೀಲರಾದ ಅಭ್ಯರ್ಥಿಗಳು.

ಇತ್ತೀಚಿನ ಸುದ್ದಿ

ಜಾಹೀರಾತು