11:52 AM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಕಿತ್ತನಗದ್ದೆ ನಾಡ್ತಿಯ ಹೊಳೆಯಲ್ಲಿ ಮರಳು ಮಾಫಿಯ ಜಾಲ ಪತ್ತೆ

06/01/2025, 22:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸಮೀಪದ ಕಿತ್ತನಗದ್ದೆ ನಾಡ್ತಿ ಹೊಳೆಯಲ್ಲಿ ಬೃಹತ್ ಪ್ರಮಾಣದ ಅಕ್ರಮ ಮರಳು ಮಾಫಿಯ ಜಾಲವೊಂದರ ಬಗ್ಗೆ ತಿಳಿದು ದಾಳಿ ಮಾಡಿರುವ ತಹಸೀಲ್ದಾರ್ ಮತ್ತು ತಂಡ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ನೆರಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿತ್ತನಗದ್ದೆ ನಾಡ್ತಿ ಹೊಳೆಯಲ್ಲಿ ಬೃಹತ್ ಪ್ರಮಾಣದ ಮರಳು ಮಾಫಿಯ ಜಾಲವೊಂದು ಪತ್ತೆಯಾಗಿದೆ. ತೀರ್ಥಹಳ್ಳಿ ತಹಸೀಲ್ದಾರ್ ರಂಜಿತ್ ಎಸ್. ಮಾಮೂಲಿನಂತೆ ಗಸ್ತು ತಿರುಗುವ ವೇಳೆ ಅಚಾನಕ್ ಮರಳು ಸಾಗಿಸುವ ವಾಹನ ಎದುರಾಗಿದ್ದು, ಅನುಮಾನದಿಂದ ಹಿಂಬಾಲಿಸಿದಾಗ ಹೊಳೆಯ ತುಂಬೆಲ್ಲ ಮರಳನ್ನು ಮೇಲೇತ್ತಲು ಹಾಗೂ ಅದನ್ನು ಫಿಲ್ಟರ್ ಮಾಡಲು ಬಳಸುವ ವಿನೂತನ ಸಾಧನಗಳು ಹಾಗೂ ಅಲ್ಲಲ್ಲಿ ಜರಡಿ ಹಿಡಿದಿಟ್ಟ ದಿಮ್ಮಿಗಳಿಂದ ಕೂಡಿದ ಫಿಲ್ಟರ್ ಕಂಡು ಬಂದ ಹಿನ್ನಲೆ ಇದೊಂದು ದೊಡ್ಡ ಮರಳು ಮಾಫಿಯ ಎಂದು ತಿಳಿದು ಹೊಳೆಯಲ್ಲಿದ್ದ ವಿನೂತನ ವಾಹನಗಳನ್ನು ತಹಶೀಲ್ದಾರ್ ರಂಜಿತ್ ವಶ ಪಡಿಸಿಕೊಂಡು ಪೊಲೀಸ್ ಕಷ್ಟಡಿಗೆ ಒಪ್ಪಿಸಿದ್ದಾರೆ.
ಈ ವೇಳೆ ಮರಳು ಕೊರೆಯಲ್ಲಿದ್ದ ಮರಳು ತುಂಬುತ್ತಿದ್ದ ಕೆಲಸಗಾರರು ಓಡಿ ಹೋಗಿದ್ದಾರೆ. ಜೊತೆಗೆ ಇಷ್ಟೊಂದು ಧಾರಾಳವಾಗಿ ಮಾಡಿದ ವಿನೂತನ ಮರಳು ಕಳ್ಳ ಸಾಗಾಣಿಕೆಯಲ್ಲಿ ದೊಡ್ಡ ದೊಡ್ಡವರ ಪಾತ್ರ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಈ ಪ್ರಕರಣ ಹೇಗೆ ಸಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು