10:41 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ವಿಕ್ರಂ ಗೌಡ ಎನ್ ಕೌಂಟರ್: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ 6 ಮಂದಿ ನಕ್ಸಲರು ಶರಣಾಗತಿ?

07/01/2025, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್ ನಿಂದ ಕಸಿವಿಸಿಗೊಂಡ ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ಜನ ನಕ್ಸಲರು ನಾಳೆ(ಜ.8)ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಒಂದೇ ಒಂದು ಎನ್ ಕೌಂಟರ್ ಗೆ ಕಾಡಲ್ಲಿ ನಕ್ಸಲರ ಸದ್ದಡಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.


ಆಲ್ ಮೋಸ್ಟ್, ಕಾಫಿನಾಡ ಕಾಡಲ್ಲಿ ನಕ್ಸಲರ ಯುಗಾಂತ್ಯವಾಗಲಿದೆ.
ನಕ್ಸಲ್ ಶರಣಾಗತಿಗೆ ದಿನಾಂಕ ನಿಗದಿಯಾಗಿದ್ದು, ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ನಕ್ಸಲರು ಶರಣಾಗುವ ಸಾಧ್ಯತೆ ಇದೆ. ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ ಪ್ರಮುಖ ನಕ್ಸಲರು ಶರಣಾಗತಿಗೆ ಬಯಸಿದ್ದಾರೆ ಎಂದು ತಿಳಿದು ಬಂದಿದೆ.
ವನಜಾಕ್ಷಿ, ಸುಂದರಿಣ ಮಾರೆಪ್ಪ, ವಸಂತ, ಜೀಶ್ ಶರಣಾಗಲಿರುವ ಪ್ರಮುಖರು.
ಮಾಜಿ ನಕ್ಸಲ್ ನೂರ್ ಜುಲ್ಫಿಕರ್ ಶ್ರೀಧರ್ ನೇತೃತ್ವದಲ್ಲಿ ಶರಣಾಗತಿಯಾಗಲಿದ್ದಾರೆ.
ಸರ್ಕಾರ ರಚನೆ ಮಾಡಿರುವ ಜಿಲ್ಲಾ ಕಮಟಿ ಮುಂದೆ ಶರಣಾಗಲಿದ್ದಾರೆ. ಶಾಂತಿಗಾಗಿ ನಾಗರೀಕ ವೇದಿಕೆಯ ಅಡಿಯಲ್ಲಿ ನಕ್ಸಲರು ಶರಣಾಗತಿ ಬಯಸಿದ್ದಾರೆ.
ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್.ಪಿ.ವಿಕ್ರಮ ಅಮಟೆ ಮುಂದೆ ಈ ಪ್ರಕ್ರಿಯೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು