6:16 PM Friday19 - December 2025
ಬ್ರೇಕಿಂಗ್ ನ್ಯೂಸ್
Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ

ಇತ್ತೀಚಿನ ಸುದ್ದಿ

ವಿಕ್ರಂ ಗೌಡ ಎನ್ ಕೌಂಟರ್: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ 6 ಮಂದಿ ನಕ್ಸಲರು ಶರಣಾಗತಿ?

07/01/2025, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್ ನಿಂದ ಕಸಿವಿಸಿಗೊಂಡ ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ 6 ಜನ ನಕ್ಸಲರು ನಾಳೆ(ಜ.8)ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಒಂದೇ ಒಂದು ಎನ್ ಕೌಂಟರ್ ಗೆ ಕಾಡಲ್ಲಿ ನಕ್ಸಲರ ಸದ್ದಡಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.


ಆಲ್ ಮೋಸ್ಟ್, ಕಾಫಿನಾಡ ಕಾಡಲ್ಲಿ ನಕ್ಸಲರ ಯುಗಾಂತ್ಯವಾಗಲಿದೆ.
ನಕ್ಸಲ್ ಶರಣಾಗತಿಗೆ ದಿನಾಂಕ ನಿಗದಿಯಾಗಿದ್ದು, ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತ ಮುಂದೆ ನಕ್ಸಲರು ಶರಣಾಗುವ ಸಾಧ್ಯತೆ ಇದೆ. ನಕ್ಸಲ್ ನಾಯಕಿ ಮುಂಡಗಾರು ಲತಾ ಸೇರಿದಂತೆ ಪ್ರಮುಖ ನಕ್ಸಲರು ಶರಣಾಗತಿಗೆ ಬಯಸಿದ್ದಾರೆ ಎಂದು ತಿಳಿದು ಬಂದಿದೆ.
ವನಜಾಕ್ಷಿ, ಸುಂದರಿಣ ಮಾರೆಪ್ಪ, ವಸಂತ, ಜೀಶ್ ಶರಣಾಗಲಿರುವ ಪ್ರಮುಖರು.
ಮಾಜಿ ನಕ್ಸಲ್ ನೂರ್ ಜುಲ್ಫಿಕರ್ ಶ್ರೀಧರ್ ನೇತೃತ್ವದಲ್ಲಿ ಶರಣಾಗತಿಯಾಗಲಿದ್ದಾರೆ.
ಸರ್ಕಾರ ರಚನೆ ಮಾಡಿರುವ ಜಿಲ್ಲಾ ಕಮಟಿ ಮುಂದೆ ಶರಣಾಗಲಿದ್ದಾರೆ. ಶಾಂತಿಗಾಗಿ ನಾಗರೀಕ ವೇದಿಕೆಯ ಅಡಿಯಲ್ಲಿ ನಕ್ಸಲರು ಶರಣಾಗತಿ ಬಯಸಿದ್ದಾರೆ.
ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಸ್.ಪಿ.ವಿಕ್ರಮ ಅಮಟೆ ಮುಂದೆ ಈ ಪ್ರಕ್ರಿಯೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು