10:33 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ !

21/05/2021, 18:16

ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ 

ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ

6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐಪಿಎಸ್ ಅಧಿಕಾರಿ ಕೆ.ವಿ. ಶರತ್ ಚಂದ್ರ ಅವರನ್ನು ಐಜಿಪಿ, ಫಾರೆಸ್ಟ್ ಸೆಲ್ ಗೆ ವರ್ಗಾವಣೆ ಮಾಡಲಾಗಿದೆ.

ಬಳ್ಳಾರಿ ವಲಯ ಐಜಿಪಿ ಎಂ. ನಂಜುಂಡಸ್ವಾಮಿ ಅವರನ್ನು(1997ನೇ ಕರ್ನಾಟಕ ಗ್ರೇಡ್ ಐಪಿಎಸ್ ಅಧಿಕಾರಿ ) ಬೆಂಗಳೂರಿನ ಬಂಧಿಖಾನೆಯ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಮನೀಶ್ ಖರ್ಬೀಕರ್ ಅವರನ್ನು ಕಲಬುರ್ಗಿಯ ಈಶಾನ್ಯ ವಿಭಾಗದ ಐಜಿಪಿ ಸ್ಥಾನದಿಂದ, ಬಳ್ಳಾರಿ ವಿಭಾಗದ ಐಜಿಪಿಯಾಗಿ, ರಾಘವೇಂದ್ರ ಸುಹಾಸ್ ಅವರನ್ನು ಬೆಳಗಾವಿಯ ನಾರ್ಥೆರೆನ್ ವಿಭಾಗದ ಐಜಿಪಿ ಸ್ಧಾನದಿಂದ ಎತ್ತಂಗಡಿ ಮಾಡಿ, ಬೆಂಗಳೂರಿನ ಆಂತರಿಕ ಭದ್ರತೆಯ ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಎನ್. ಸತೀಶ್ ಕುಮಾರ್ ಅವರನ್ನು ಕಲಬುರ್ಗಿ ನಗರ ಐಜಿಪಿ ಸ್ಥಾನದಿಂದ ವರ್ಗಾವಣೆ ಮಾಡಿ, ಬೆಳಗಾವಿ ವಿಭಾಗದ ಐಜಿಪಿಯಾಗಿ, ವೈ. ಎಸ್. ರವಿ ಕುಮಾರ್ ಅವರನ್ನು ನೇಮಕಾತಿ ವಿಭಾಗದ ಡಿಐಜಿಪಿ ಸ್ಥಾನದಿಂದ ವರ್ಗಾವಣೆ ಮಾಡಿ, ಕಲಬುರ್ಗಿ ನಗರ ವ್ಯಾಪ್ತಿಯ ಡಿಐಜಿ ಹಾಗೂ ಕಮೀಷನರ್ ಆಫ್ ಪೊಲೀಸ್ ಆಗಿ ವರ್ಗಾವಣೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು