2:06 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ !

21/05/2021, 18:16

ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ 

ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ

6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐಪಿಎಸ್ ಅಧಿಕಾರಿ ಕೆ.ವಿ. ಶರತ್ ಚಂದ್ರ ಅವರನ್ನು ಐಜಿಪಿ, ಫಾರೆಸ್ಟ್ ಸೆಲ್ ಗೆ ವರ್ಗಾವಣೆ ಮಾಡಲಾಗಿದೆ.

ಬಳ್ಳಾರಿ ವಲಯ ಐಜಿಪಿ ಎಂ. ನಂಜುಂಡಸ್ವಾಮಿ ಅವರನ್ನು(1997ನೇ ಕರ್ನಾಟಕ ಗ್ರೇಡ್ ಐಪಿಎಸ್ ಅಧಿಕಾರಿ ) ಬೆಂಗಳೂರಿನ ಬಂಧಿಖಾನೆಯ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಮನೀಶ್ ಖರ್ಬೀಕರ್ ಅವರನ್ನು ಕಲಬುರ್ಗಿಯ ಈಶಾನ್ಯ ವಿಭಾಗದ ಐಜಿಪಿ ಸ್ಥಾನದಿಂದ, ಬಳ್ಳಾರಿ ವಿಭಾಗದ ಐಜಿಪಿಯಾಗಿ, ರಾಘವೇಂದ್ರ ಸುಹಾಸ್ ಅವರನ್ನು ಬೆಳಗಾವಿಯ ನಾರ್ಥೆರೆನ್ ವಿಭಾಗದ ಐಜಿಪಿ ಸ್ಧಾನದಿಂದ ಎತ್ತಂಗಡಿ ಮಾಡಿ, ಬೆಂಗಳೂರಿನ ಆಂತರಿಕ ಭದ್ರತೆಯ ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಎನ್. ಸತೀಶ್ ಕುಮಾರ್ ಅವರನ್ನು ಕಲಬುರ್ಗಿ ನಗರ ಐಜಿಪಿ ಸ್ಥಾನದಿಂದ ವರ್ಗಾವಣೆ ಮಾಡಿ, ಬೆಳಗಾವಿ ವಿಭಾಗದ ಐಜಿಪಿಯಾಗಿ, ವೈ. ಎಸ್. ರವಿ ಕುಮಾರ್ ಅವರನ್ನು ನೇಮಕಾತಿ ವಿಭಾಗದ ಡಿಐಜಿಪಿ ಸ್ಥಾನದಿಂದ ವರ್ಗಾವಣೆ ಮಾಡಿ, ಕಲಬುರ್ಗಿ ನಗರ ವ್ಯಾಪ್ತಿಯ ಡಿಐಜಿ ಹಾಗೂ ಕಮೀಷನರ್ ಆಫ್ ಪೊಲೀಸ್ ಆಗಿ ವರ್ಗಾವಣೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು