8:55 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ !

21/05/2021, 18:16

ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ 

ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ

6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐಪಿಎಸ್ ಅಧಿಕಾರಿ ಕೆ.ವಿ. ಶರತ್ ಚಂದ್ರ ಅವರನ್ನು ಐಜಿಪಿ, ಫಾರೆಸ್ಟ್ ಸೆಲ್ ಗೆ ವರ್ಗಾವಣೆ ಮಾಡಲಾಗಿದೆ.

ಬಳ್ಳಾರಿ ವಲಯ ಐಜಿಪಿ ಎಂ. ನಂಜುಂಡಸ್ವಾಮಿ ಅವರನ್ನು(1997ನೇ ಕರ್ನಾಟಕ ಗ್ರೇಡ್ ಐಪಿಎಸ್ ಅಧಿಕಾರಿ ) ಬೆಂಗಳೂರಿನ ಬಂಧಿಖಾನೆಯ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಮನೀಶ್ ಖರ್ಬೀಕರ್ ಅವರನ್ನು ಕಲಬುರ್ಗಿಯ ಈಶಾನ್ಯ ವಿಭಾಗದ ಐಜಿಪಿ ಸ್ಥಾನದಿಂದ, ಬಳ್ಳಾರಿ ವಿಭಾಗದ ಐಜಿಪಿಯಾಗಿ, ರಾಘವೇಂದ್ರ ಸುಹಾಸ್ ಅವರನ್ನು ಬೆಳಗಾವಿಯ ನಾರ್ಥೆರೆನ್ ವಿಭಾಗದ ಐಜಿಪಿ ಸ್ಧಾನದಿಂದ ಎತ್ತಂಗಡಿ ಮಾಡಿ, ಬೆಂಗಳೂರಿನ ಆಂತರಿಕ ಭದ್ರತೆಯ ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಎನ್. ಸತೀಶ್ ಕುಮಾರ್ ಅವರನ್ನು ಕಲಬುರ್ಗಿ ನಗರ ಐಜಿಪಿ ಸ್ಥಾನದಿಂದ ವರ್ಗಾವಣೆ ಮಾಡಿ, ಬೆಳಗಾವಿ ವಿಭಾಗದ ಐಜಿಪಿಯಾಗಿ, ವೈ. ಎಸ್. ರವಿ ಕುಮಾರ್ ಅವರನ್ನು ನೇಮಕಾತಿ ವಿಭಾಗದ ಡಿಐಜಿಪಿ ಸ್ಥಾನದಿಂದ ವರ್ಗಾವಣೆ ಮಾಡಿ, ಕಲಬುರ್ಗಿ ನಗರ ವ್ಯಾಪ್ತಿಯ ಡಿಐಜಿ ಹಾಗೂ ಕಮೀಷನರ್ ಆಫ್ ಪೊಲೀಸ್ ಆಗಿ ವರ್ಗಾವಣೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು