2:57 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ !

21/05/2021, 18:16

ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ 

ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ

6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐಪಿಎಸ್ ಅಧಿಕಾರಿ ಕೆ.ವಿ. ಶರತ್ ಚಂದ್ರ ಅವರನ್ನು ಐಜಿಪಿ, ಫಾರೆಸ್ಟ್ ಸೆಲ್ ಗೆ ವರ್ಗಾವಣೆ ಮಾಡಲಾಗಿದೆ.

ಬಳ್ಳಾರಿ ವಲಯ ಐಜಿಪಿ ಎಂ. ನಂಜುಂಡಸ್ವಾಮಿ ಅವರನ್ನು(1997ನೇ ಕರ್ನಾಟಕ ಗ್ರೇಡ್ ಐಪಿಎಸ್ ಅಧಿಕಾರಿ ) ಬೆಂಗಳೂರಿನ ಬಂಧಿಖಾನೆಯ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಮನೀಶ್ ಖರ್ಬೀಕರ್ ಅವರನ್ನು ಕಲಬುರ್ಗಿಯ ಈಶಾನ್ಯ ವಿಭಾಗದ ಐಜಿಪಿ ಸ್ಥಾನದಿಂದ, ಬಳ್ಳಾರಿ ವಿಭಾಗದ ಐಜಿಪಿಯಾಗಿ, ರಾಘವೇಂದ್ರ ಸುಹಾಸ್ ಅವರನ್ನು ಬೆಳಗಾವಿಯ ನಾರ್ಥೆರೆನ್ ವಿಭಾಗದ ಐಜಿಪಿ ಸ್ಧಾನದಿಂದ ಎತ್ತಂಗಡಿ ಮಾಡಿ, ಬೆಂಗಳೂರಿನ ಆಂತರಿಕ ಭದ್ರತೆಯ ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಎನ್. ಸತೀಶ್ ಕುಮಾರ್ ಅವರನ್ನು ಕಲಬುರ್ಗಿ ನಗರ ಐಜಿಪಿ ಸ್ಥಾನದಿಂದ ವರ್ಗಾವಣೆ ಮಾಡಿ, ಬೆಳಗಾವಿ ವಿಭಾಗದ ಐಜಿಪಿಯಾಗಿ, ವೈ. ಎಸ್. ರವಿ ಕುಮಾರ್ ಅವರನ್ನು ನೇಮಕಾತಿ ವಿಭಾಗದ ಡಿಐಜಿಪಿ ಸ್ಥಾನದಿಂದ ವರ್ಗಾವಣೆ ಮಾಡಿ, ಕಲಬುರ್ಗಿ ನಗರ ವ್ಯಾಪ್ತಿಯ ಡಿಐಜಿ ಹಾಗೂ ಕಮೀಷನರ್ ಆಫ್ ಪೊಲೀಸ್ ಆಗಿ ವರ್ಗಾವಣೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು