11:51 AM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ ಇಲಾಖೆ ಹೈ ಅಲರ್ಟ್

07/01/2025, 12:09

ಬೆಂಗಳೂರು(reporterkarnataka.com):ಎಚ್ ಎಂಪಿವಿ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ ಎನ್ನಲಾಗಿದ್ದು, ಬೆಂಗಳೂರಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ಕರೆದಿದ್ದಾರೆ. ಮಧ್ಯಾಹ್ನ ಸಭೆ ನಡೆಯಲಿದ್ದು, ವೈರಸ್ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ. ವೈರಸ್ ಬಗ್ಗೆ ಜಾಗೃತಿ ವಹಿಸಲು ಮಾರ್ಗಸೂಚಿ ಹೊರಡಿಸುವ ಸಾಧ್ಯತೆಯಿದೆ. ಮಗುವಿಗೆ ಜ್ವರ ಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ವೇಳೆ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಿದಾಗ ಎಚ್ ಎಂಪಿವಿ ವೈರಸ್ ಇರುವುದು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಚೀನಾದಲ್ಲಿ ಎಚ್ ಎಂಪಿವಿ(HMPV) ಪ್ರಕರಣಗಳು ವರದಿಯಾಗುತ್ತಿವೆ. ಇದು ಕೋವಿಡ್-19 ನಂತಹ ಗಂಭೀರ ಪರಿಸ್ಥಿತಿಗೆ ಕಾರಣವಾಗುತ್ತಿಲ್ಲ ಎಂದು ತಜ್ಞರು ಹೇಳಿದ್ದಾರೆ. ನಾಗರಿಕರು ಯಾವುದೇ ತರಹ ಭಯಪಡುವ ಅವಶ್ಯಕತೆ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು