3:50 PM Sunday10 - August 2025
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ…

ಇತ್ತೀಚಿನ ಸುದ್ದಿ

ರಾಯಚೂರು ನಗರದ ಆಯ್ದ 10 ಪಾರ್ಕುಗಳಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲು ಚಿಂತನೆ

07/01/2025, 23:01

ಬಳ್ಳಾರಿ(reporterkarnataka.com): ನಗರದ ಆಯ್ದ 10 ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಬಳ್ಳಾರಿಯ ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪಿರಮಿಡ್ ಸ್ಪಿರಿಚುವಲ್ ಸೊಸೈಟಿ ಮೂವಮೆಂಟ್ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿಮ್ಮ ಸಂಸ್ಥೆಯ ಬೇಡಿಕೆಯಂತೆ ನಗರದ 10 ಆಯ್ದ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರ ನಿರ್ಮಿಸಲಾಗುವುದು, ಜನರು ಇದರ ಸದುಪಯೋಗ ಪಡೆಯಬೇಕು ಎಂದರು.
ಮಾನಸಿಕ ಖಿನ್ನತೆಯಿಂದ ಹೊರ ಬರಲು ಧ್ಯಾನ ಸಹಕಾರಿ ಎಂದು ಹೇಳಿದ ಅವರು, ಖಿನ್ನತೆಗೆ ಸಿಲುಕಿದ್ದ ಎಷ್ಟೋ ಜನರಿಗೆ ಧ್ಯಾನದಿಂದ ಜೀವದಾನ ಆಗಿದೆ ಎಂದರು.
ಭೌತಿಕ ಜಗತ್ತಿನ ಆಸೆ, ಆಕಾಂಕ್ಷೆಗಳಿಂದಾಗಿ ಜನರು ಒತ್ತಡಕ್ಕೆ ಸಿಲುಕಿದ್ದಾರೆ, ಅನಾರೋಗ್ಯಕರ ಸ್ಪರ್ಧೆ, ನಾ ಮುಂದೆ ಹೋಗಬೇಕೆಂಬ ಒತ್ತಡಕ್ಕೆ ಸಿಲುಕಿ ನೆಮ್ಮದಿ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಮಾಸ್ಟರ್ ಅಯ್ಯಪ್ಪ, ಪ್ರತಿ ದೇವಸ್ಥಾನ ಪಿರಾಮಿಡ್ ಕೇಂದ್ರ ಆಗಬಹುದು ಎಂದರು.
ನಗರದ ಪಾರ್ಕಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆ ಆಗಬೇಕು,
ಧ್ಯಾನದಿಂದ ಎಲ್ಲವನ್ನೂ ಸಾಧಿಸಬಹುದು ಎಂದರು.
ಮಾಸ್ಟರ್ ಕೇತಪ್ಪ ಅವರು ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯ ಆಗಬೇಕು, ದೇಶದ ಎಲ್ಲ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆಯಾಗಬೇಕು ಎಂದರು.
ಕಾರ್ಯಕ್ರಮ ಆಯೋಜಿಸಿದ್ದ ಸುಮಾ ರೆಡ್ಡಿ ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು