11:52 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಾಯಚೂರು ನಗರದ ಆಯ್ದ 10 ಪಾರ್ಕುಗಳಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲು ಚಿಂತನೆ

07/01/2025, 23:01

ಬಳ್ಳಾರಿ(reporterkarnataka.com): ನಗರದ ಆಯ್ದ 10 ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಬಳ್ಳಾರಿಯ ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪಿರಮಿಡ್ ಸ್ಪಿರಿಚುವಲ್ ಸೊಸೈಟಿ ಮೂವಮೆಂಟ್ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿಮ್ಮ ಸಂಸ್ಥೆಯ ಬೇಡಿಕೆಯಂತೆ ನಗರದ 10 ಆಯ್ದ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರ ನಿರ್ಮಿಸಲಾಗುವುದು, ಜನರು ಇದರ ಸದುಪಯೋಗ ಪಡೆಯಬೇಕು ಎಂದರು.
ಮಾನಸಿಕ ಖಿನ್ನತೆಯಿಂದ ಹೊರ ಬರಲು ಧ್ಯಾನ ಸಹಕಾರಿ ಎಂದು ಹೇಳಿದ ಅವರು, ಖಿನ್ನತೆಗೆ ಸಿಲುಕಿದ್ದ ಎಷ್ಟೋ ಜನರಿಗೆ ಧ್ಯಾನದಿಂದ ಜೀವದಾನ ಆಗಿದೆ ಎಂದರು.
ಭೌತಿಕ ಜಗತ್ತಿನ ಆಸೆ, ಆಕಾಂಕ್ಷೆಗಳಿಂದಾಗಿ ಜನರು ಒತ್ತಡಕ್ಕೆ ಸಿಲುಕಿದ್ದಾರೆ, ಅನಾರೋಗ್ಯಕರ ಸ್ಪರ್ಧೆ, ನಾ ಮುಂದೆ ಹೋಗಬೇಕೆಂಬ ಒತ್ತಡಕ್ಕೆ ಸಿಲುಕಿ ನೆಮ್ಮದಿ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಮಾಸ್ಟರ್ ಅಯ್ಯಪ್ಪ, ಪ್ರತಿ ದೇವಸ್ಥಾನ ಪಿರಾಮಿಡ್ ಕೇಂದ್ರ ಆಗಬಹುದು ಎಂದರು.
ನಗರದ ಪಾರ್ಕಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆ ಆಗಬೇಕು,
ಧ್ಯಾನದಿಂದ ಎಲ್ಲವನ್ನೂ ಸಾಧಿಸಬಹುದು ಎಂದರು.
ಮಾಸ್ಟರ್ ಕೇತಪ್ಪ ಅವರು ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯ ಆಗಬೇಕು, ದೇಶದ ಎಲ್ಲ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆಯಾಗಬೇಕು ಎಂದರು.
ಕಾರ್ಯಕ್ರಮ ಆಯೋಜಿಸಿದ್ದ ಸುಮಾ ರೆಡ್ಡಿ ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು