11:27 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ರಾಯಚೂರು ನಗರದ ಆಯ್ದ 10 ಪಾರ್ಕುಗಳಲ್ಲಿ ಧ್ಯಾನ ಕೇಂದ್ರ ಸ್ಥಾಪಿಸಲು ಚಿಂತನೆ

07/01/2025, 23:01

ಬಳ್ಳಾರಿ(reporterkarnataka.com): ನಗರದ ಆಯ್ದ 10 ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳ ಸ್ಥಾಪನೆಗೆ ಯೋಜನೆ ರೂಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಬಳ್ಳಾರಿಯ ಗಾಂಧಿನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪಿರಮಿಡ್ ಸ್ಪಿರಿಚುವಲ್ ಸೊಸೈಟಿ ಮೂವಮೆಂಟ್ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಿಮ್ಮ ಸಂಸ್ಥೆಯ ಬೇಡಿಕೆಯಂತೆ ನಗರದ 10 ಆಯ್ದ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರ ನಿರ್ಮಿಸಲಾಗುವುದು, ಜನರು ಇದರ ಸದುಪಯೋಗ ಪಡೆಯಬೇಕು ಎಂದರು.
ಮಾನಸಿಕ ಖಿನ್ನತೆಯಿಂದ ಹೊರ ಬರಲು ಧ್ಯಾನ ಸಹಕಾರಿ ಎಂದು ಹೇಳಿದ ಅವರು, ಖಿನ್ನತೆಗೆ ಸಿಲುಕಿದ್ದ ಎಷ್ಟೋ ಜನರಿಗೆ ಧ್ಯಾನದಿಂದ ಜೀವದಾನ ಆಗಿದೆ ಎಂದರು.
ಭೌತಿಕ ಜಗತ್ತಿನ ಆಸೆ, ಆಕಾಂಕ್ಷೆಗಳಿಂದಾಗಿ ಜನರು ಒತ್ತಡಕ್ಕೆ ಸಿಲುಕಿದ್ದಾರೆ, ಅನಾರೋಗ್ಯಕರ ಸ್ಪರ್ಧೆ, ನಾ ಮುಂದೆ ಹೋಗಬೇಕೆಂಬ ಒತ್ತಡಕ್ಕೆ ಸಿಲುಕಿ ನೆಮ್ಮದಿ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಮಾಸ್ಟರ್ ಅಯ್ಯಪ್ಪ, ಪ್ರತಿ ದೇವಸ್ಥಾನ ಪಿರಾಮಿಡ್ ಕೇಂದ್ರ ಆಗಬಹುದು ಎಂದರು.
ನಗರದ ಪಾರ್ಕಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆ ಆಗಬೇಕು,
ಧ್ಯಾನದಿಂದ ಎಲ್ಲವನ್ನೂ ಸಾಧಿಸಬಹುದು ಎಂದರು.
ಮಾಸ್ಟರ್ ಕೇತಪ್ಪ ಅವರು ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಧ್ಯಾನ ಕಡ್ಡಾಯ ಆಗಬೇಕು, ದೇಶದ ಎಲ್ಲ ಪಾರ್ಕ್’ಗಳಲ್ಲಿ ಧ್ಯಾನ ಕೇಂದ್ರಗಳು ಸ್ಥಾಪನೆಯಾಗಬೇಕು ಎಂದರು.
ಕಾರ್ಯಕ್ರಮ ಆಯೋಜಿಸಿದ್ದ ಸುಮಾ ರೆಡ್ಡಿ ಸ್ವಾಗತಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು