9:17 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

08/01/2025, 16:09

*ಸಿಎಂ ಭ್ರಷ್ಟಾಚಾರ ನಿಯಂತ್ರಿಸಲು ಮುಂದಾದರೆ ಕುರ್ಚಿಗೆ ಕಂಟಕವಾಗುವ ಆತಂಕ:ಬಸವರಾಜ ಬೊಮ್ಮಾಯಿ*

ಬೆಂಗಳೂರು(reporterkarnataka.com): ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವುದು ಪ್ರಶ್ನೆಯಾಗಿದ್ದು, ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಆರಂಭದಿಂದಲೂ ಇದೆ, ಇದು ನಿರೀಕ್ಷಿತ ಬೆಳವಣಿಗೆ ಇದರಲ್ಲಿ ಬಹಳ ಮುಖ್ಯ ವಿಚಾರ ಡಿ.ಕೆ.vಶಿವಕುಮಾರ್ ಅವರ ಸಹನೆ ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ಧಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಡಿಕೆಶಿವಕುಮಾರ್ ಅವರ ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ‌. ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಹೇಳಿದರು.
ಕಾಂಗ್ರೆಸ್ ಮೇಲಿನ ಕಮೀಷನ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಎಲ್ಲದರಲ್ಲಿ ಕಮೀಷನ್, ಭ್ರಷ್ಟಾಚಾರ ನಡೆಸುತ್ತಿದೆ. ಇದರಿಂದ ಜನ ಹೈರಾಣಾಗಿದ್ದಾರೆ. ಅಬಕಾರಿ ಗುತ್ತಿಗೆದಾರರು, ಪಿಡಬ್ಲ್ಯುಡಿ, ನೀರಾವರಿ ಇಲಾಖೆಯ ಗುತ್ತಿಗೆದಾರರು ಅನುಭವಿಸುತ್ತಿದ್ದಾರೆ. ಜನ ಸಾಮಾನ್ಯರು ರೋಸಿ ಹೋಗಿದ್ದಾರೆ. ಮಧ್ಯಮ ವರ್ಗದವರು ಹೈರಾಣಾಗಿದ್ದಾರೆ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಒಂದು ಸೈಟ್ ತೆಗೆದುಕೊಳ್ಳಲಾಗದ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿದೆ. ಎಸ್‌ಸಿ, ಎಸ್ಟಿ ಬೋರ್ ವೆಲ್ ಗಳಿಗೂ ಕಮೀಷನ್ ಪಡೆಯುತ್ತಿದ್ದಾರೆ. ಭ್ರಷ್ಟಾಚಾರ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಇದನ್ನು ಸಿಎಂ ನಿರಾಕರಿಸಿರಬಹುದು, ಅವರಿಗೆ ಹಿಡಿತ ಕೈ ತಪ್ಪಿರಬಹುದು, ಅವರೇ ಭಾಗಿಯಾಗಿರಬಹುದು ಅಥವಾ ಅದರ ಬಗ್ಗೆ ಮಾತನಾಡಿದರೆ ಅಧಿಕಾರಕ್ಕೆ ಧಕ್ಕೆ ಬರುತ್ತದೆ ಎನ್ನುವ ಭಾವನೆ ಮೂಡಿದೆ. ಸರ್ಕಾರದಲ್ಲಿ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ಪರ್ಸೆಂಟ್ ಕಮೀಷನ್ ಇದೆ. ಇಷ್ಟೇ ಇದೆ ಅಂತ ಹೇಳಲು ಆಗುವುದಿಲ್ಲ. ಆದರೆ, ಕುಮಾರಸ್ವಾಮಿಯವರು ಹೇಳಿರುವುದು ಭ್ರಷ್ಟಾಚಾರ ಮಿತಿಮೀರಿದೆ ಎಂದು ಹೇಳಿದರು.
ಕಾಂಗ್ರೆಸ್ ನಲ್ಲಿ ಡಿನ್ನರ್ ಮೀಟಿಂಗ್ ಗಳು ಅವರ ಆಂತರಿಕ ವಿಚಾರ, ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ. ಆದರೆ, ಆಡಳಿತ ಯಂತ್ರ ಕುಸಿದಿದೆ. ಇದರಿಂದ ಸಾಮಾನ್ಯ ಜನರು ತೊಂದರೆ ಅನುಭವಿಸುವಂತಾಗಿದೆ. ತಾಯಂದಿರು ಸಾಯುತ್ತಿದ್ದಾರೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸರಿಯಾಗಿ ದೊರೆಯುತ್ತಿಲ್ಲ. ಅಂಗನಾವಡಿ ಕಾರ್ಯಕರ್ತರು ಸರಿಯಾಗಿ ಗೌರವಧನ ಪಡೆಯುತ್ತಿಲ್ಲ. ನಾವು ಪ್ರತಿಪಕ್ಷವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ ಎಂದು ಅವರು ನುಡಿದರು.
ಕಾಂಗ್ರೆಸ್ ದೆಹಲಿಯಲ್ಲಿ ಮಹಿಳೆಯರಿಗೆ ಪ್ಯಾರಿ ದೀದಿ ಯೋಜನೆ ಘೋಷಣೆ ಮಾಡಿರುವುದರಿಂದ ಅಲ್ಲಿನ ಜನರು ನಂಬುವುದಿಲ್ಲ. ಈಗಾಗಲೇ ಗ್ಯಾರೆಂಟಿ ಹೆಸರಿನಲ್ಲಿ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕವನ್ನು ದಿವಾಳಿ ಮಾಡಿದ್ದಾರೆ. ಅವರು ಅಧಿಕಾರಕ್ಕೆ ಬಂದರೆ ದೆಹಲಿಯನ್ನೂ ದಿವಾಳಿ ಮಾಡುತ್ತಾರೆ. ಹೀಗಾಗಿ ಜನರು ಕಾಂಗ್ರೆಸನ್ನು ನಂಬುವುದಿಲ್ಲ ಎಂದರು.
*ಗೊಂದಲಕ್ಕೆ ತೆರೆ*
ಬಿಜೆಪಿಯಲ್ಲೂ ಭೋಜನ ಕೂಟ ನಡೆಯುತ್ತಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಆಗಾಗ ಒಟ್ಟಿಗೆ ಊಟ ಮಾಡುತ್ತೇವೆ. ಅದರಲ್ಲಿ ಮಹತ್ವ ಏನು ಇಲ್ಲ ಎಂದರು.
ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳ ಬಗ್ಗೆ ಪಕ್ಷದ ಹೈಕಮಾಂಡ್ ಗಮನ ಹರಿಸಿದೆ. ಈ ತಿಂಗಳಲ್ಲಿ ಸರಿ ಹೋಗಲಿದೆ. ಒಳ್ಳೆಯ ರೀತಿಯಲ್ಲಿ ಎಲ್ಲವೂ ಬಗೆಹರಿಯುವ ವಾತಾವರಣವನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು