11:39 AM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು: ಅಗಲಿದ ಹಿರಿಯ ಸಾಹಿತಿ ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

08/01/2025, 22:27

ಮಂಗಳೂರು(reporterkarnataka.com):ಕಲ್ಕೂರ ಪ್ರತಿಷ್ಠಾನ ವತಿಯಿಂದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ
ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಗರ ಶಾರದಾ ವಿದ್ಯಾಲಯದಲ್ಲಿ ಬುಧವಾರ ನಡೆಯಿತು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ. ಬಿ.ಎ. ವಿವೇಕ್ ರೈ ಅವರು ಮಾತನಾಡಿ, ನಾ ಡಿಸೋಜ ಅವರು
ಎಲ್ಲಾ ರೀತಿಯ ಜನರಿಗೂ ಬೇಕಾಗಿರುವವರು. ಅವರದ್ದು ಪಕ್ಷ ಬೇಧವಿಲ್ಲದ ವ್ಯಕ್ತಿತ್ವ ಎಂದರು.
ಪ್ರತಿಯೊಂದು ಕಥೆಗಳಲ್ಲಿಯೂ ನಾಡೋಜ ಅವರು
ಮಲೆನಾಡಿನ ಚಿತ್ರಣ,ಭ್ರಷ್ಟಾಚಾರ, ಮಹಿಳೆಯ ಬಗ್ಗೆ ಉಲ್ಲೇಖ ಕಾಣಬಹುದಾಗಿದೆ. ಮಕ್ಕಳ ಸಾಹಿತ್ಯವನ್ನು ಪರಿಚಯಿಸಿದರು. ನಮ್ಮ ಕನ್ನಡ ಶಾಲೆಗಳಲ್ಲಿ ಅವರ ಮಕ್ಕಳ ಸಾಹಿತ್ಯ ಪುಸ್ತಕಗಳನ್ನು ವಿತರಿಸಬೇಕು.ಅನೇಕ ಹೋರಾಟಗಳಲ್ಲಿ ಅವರು ಭಾಗಿದ್ದಾರೆ. ಮಲೆನಾಡಿನ ಎಲ್ಲಾ ಹೋರಾಟಗಳಲ್ಲಿ ಬಾಗಿಯಾಗಿದ್ದಾರೆ.
ಎಂದು ಬಿ.ಎ.ವಿವೇಕ ರೈ ಅವರು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಪ್ರಸ್ತಾವಿಸಿದರು. ಶಾರದಾ ಕಾಲೇಜಿನ ಎಂ.ಬಿ. ಪುರಾಣಿಕ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಪುಷ್ಕಳ ಕುಮಾರ್, ಹರೀಶ್ ರೈ, ತಮ್ಮ ಲಕ್ಷ್ಮಣ, ಸುಧಾಕರ ರಾವ್ ಪೇಜಾವರ,ದಯಾನಂದ ಕಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು