2:03 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು: ಅಗಲಿದ ಹಿರಿಯ ಸಾಹಿತಿ ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

08/01/2025, 22:27

ಮಂಗಳೂರು(reporterkarnataka.com):ಕಲ್ಕೂರ ಪ್ರತಿಷ್ಠಾನ ವತಿಯಿಂದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿ
ನಾ ಡಿಸೋಜ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ನಗರ ಶಾರದಾ ವಿದ್ಯಾಲಯದಲ್ಲಿ ಬುಧವಾರ ನಡೆಯಿತು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ. ಬಿ.ಎ. ವಿವೇಕ್ ರೈ ಅವರು ಮಾತನಾಡಿ, ನಾ ಡಿಸೋಜ ಅವರು
ಎಲ್ಲಾ ರೀತಿಯ ಜನರಿಗೂ ಬೇಕಾಗಿರುವವರು. ಅವರದ್ದು ಪಕ್ಷ ಬೇಧವಿಲ್ಲದ ವ್ಯಕ್ತಿತ್ವ ಎಂದರು.
ಪ್ರತಿಯೊಂದು ಕಥೆಗಳಲ್ಲಿಯೂ ನಾಡೋಜ ಅವರು
ಮಲೆನಾಡಿನ ಚಿತ್ರಣ,ಭ್ರಷ್ಟಾಚಾರ, ಮಹಿಳೆಯ ಬಗ್ಗೆ ಉಲ್ಲೇಖ ಕಾಣಬಹುದಾಗಿದೆ. ಮಕ್ಕಳ ಸಾಹಿತ್ಯವನ್ನು ಪರಿಚಯಿಸಿದರು. ನಮ್ಮ ಕನ್ನಡ ಶಾಲೆಗಳಲ್ಲಿ ಅವರ ಮಕ್ಕಳ ಸಾಹಿತ್ಯ ಪುಸ್ತಕಗಳನ್ನು ವಿತರಿಸಬೇಕು.ಅನೇಕ ಹೋರಾಟಗಳಲ್ಲಿ ಅವರು ಭಾಗಿದ್ದಾರೆ. ಮಲೆನಾಡಿನ ಎಲ್ಲಾ ಹೋರಾಟಗಳಲ್ಲಿ ಬಾಗಿಯಾಗಿದ್ದಾರೆ.
ಎಂದು ಬಿ.ಎ.ವಿವೇಕ ರೈ ಅವರು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಪ್ರಸ್ತಾವಿಸಿದರು. ಶಾರದಾ ಕಾಲೇಜಿನ ಎಂ.ಬಿ. ಪುರಾಣಿಕ್, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಭುವನಾಭಿರಾಮ ಉಡುಪ, ಪುಷ್ಕಳ ಕುಮಾರ್, ಹರೀಶ್ ರೈ, ತಮ್ಮ ಲಕ್ಷ್ಮಣ, ಸುಧಾಕರ ರಾವ್ ಪೇಜಾವರ,ದಯಾನಂದ ಕಟೀಲ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು